ವಿದೇಶಾಂಗ ಸಚಿವ ಎಸ್ ಜೈಶಂಕರ್ 
ದೇಶ

ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು 'ಆಪರೇಷನ್ ಅಜಯ್' ಘೋಷಣೆ

ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಆಪರೇಷನ್ ಅಜಯ್ ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಹೇಳಿದ್ದಾರೆ.

ನವದೆಹಲಿ: ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಆಪರೇಷನ್ ಅಜಯ್ ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಹೇಳಿದ್ದಾರೆ.

ಇಸ್ರೇಲ್‌ನಿಂದ ಹಿಂದಿರುಗಲು ಬಯಸುವ ಭಾರತದ ನಾಗರಿಕರಿಗೆ  ಅನುಕೂಲವಾಗುವಂತೆ ‘ಆಪರೇಷನ್ ಅಜಯ್’  ಅನ್ನು ಪ್ರಾರಂಭಿಸಲಾಗುತ್ತಿದ್ದು, ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇನ್ನಿತರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಜೈಶಂಕರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಜೈಶಂಕರ್ ಅವರು ತಿಳಿಸಿದ್ದಾರೆ.

ಇಸ್ರೇಲ್​ ಹಾಗೂ ಹಮಾಸ್ ಉಗ್ರಗಾಮಿಗಳ ಯುದ್ಧ ತೀವ್ರ ಸ್ವರೂಪೆ ಪಡೆಯುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆಯ ಬಗ್ಗೆ ಇದೀಗ ಕಳವಳ ವ್ಯಕ್ತಪಡಿಸಲಾಗುತ್ತಿದೆ. ಇಸ್ರೇಲ್‌ನಲ್ಲಿ ನೆಲೆಸಿರುವ 18,000 ಭಾರತೀಯ ಪ್ರಜೆಗಳಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!