ಕಾರ್ತ್ಯಾಯಿನಿ ಅಮ್ಮ 
ದೇಶ

ಕೇರಳದ ಸಾಕ್ಷರತಾ 'ರಾಯಭಾರಿ': ಶತಾಯುಷಿ ಕಾರ್ತ್ಯಾಯನಿ ಅಮ್ಮ ಇನ್ನಿಲ್ಲ

96ನೇ ವಯಸ್ಸಿನಲ್ಲಿ ಕೇರಳದ ಸಾಕ್ಷರತಾ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ, ನಾರಿಶಕ್ತಿ ಪುರಸ್ಕೃತ ಕಾರ್ತ್ಯಾಯನಿ ಅಮ್ಮ ಅವರು ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರಿಗೆ 101 ವರ್ಷ ವಯಸ್ಸಾಗಿತ್ತು.

ತಿರುವನಂತಪುರ:  96ನೇ ವಯಸ್ಸಿನಲ್ಲಿ ಕೇರಳದ ಸಾಕ್ಷರತಾ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ, ನಾರಿಶಕ್ತಿ ಪುರಸ್ಕೃತ ಕಾರ್ತ್ಯಾಯನಿ ಅಮ್ಮ ಅವರು ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರಿಗೆ 101 ವರ್ಷ ವಯಸ್ಸಾಗಿತ್ತು.

ಆಳಪ್ಪುಳ ಜಿಲ್ಲೆಯ ಚೆಪ್ಪಾಡ್‌ ಗ್ರಾಮದ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 101 ವಯಸ್ಸಾಗಿತ್ತು. ಪಾರ್ಶ್ವವಾಯು ತುತ್ತಾಗಿದ್ದ ಅವರು ಕೆಲ ದಿನಗಳಿಂದ ಹಾಸಿಗೆ ಹಿಡಿದಿದ್ದರು. 96ನೇ ವಯಸ್ಸಿನಲ್ಲಿ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ‘ಅತಿ ಹಿರಿಯ ವಿದ್ಯಾರ್ಥಿ’ ಎನಿಸಿಕೊಂಡಿದ್ದರು. ಅಲ್ಲದೆ ನಾಲ್ಕನೇ ತರಗತಿಗೆ ಸಮಾನವಾದ ‘ಅಕ್ಷರಲಕ್ಷಂ’ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದರು.

ಸಾಕ್ಷರತಾ ಪರೀಕ್ಷೆಯಲ್ಲಿ ರ್ಯಾಂಕ್​ ಗಳಿಸಿದ ಹಿನ್ನೆಲೆ 2018ರಲ್ಲಿ ಕಾತ್ಯಾಯನಿ ಅಮ್ಮಗೆ ಕೇಂದ್ರ ಸರ್ಕಾರವು ನಾರಿಶಕ್ತಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಬಳಿಕ ಇವರನ್ನು 53 ಸದಸ್ಯ ರಾಷ್ಟ್ರಗಳಲ್ಲಿ ದೂರ ಶಿಕ್ಷಣ ಪ್ರಚಾರಕ್ಕಾಗಿ ಕಾಮನ್​ವೆಲ್ತ್​ ಲರ್ನಿಂಗ್​ನ ಸದ್ಭಾವನಾ ರಾಯಭಾರಿಯನ್ನಾಗಿ ಆಯ್ಕೆ ಮಾಡಲಾಯಿತು.

ಈ ಪರೀಕ್ಷೆಗೆ ಹಾಜರಾದ 43,330 ಅಭ್ಯರ್ಥಿಗಳ ಪೈಕಿ ಕಾರ್ತ್ಯಾಯಿನಿ ಅಮ್ಮ ಅತಿ ಹಿರಿಯರೆನಿಸಿಕೊಂಡಿದ್ದರು. 2020ರ ಮಾರ್ಚ್‌ನಲ್ಲಿ ಮಹಿಳಾ ದಿನದಂದು ಆಗಿನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಂದ ನಾರಿಶಕ್ತಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

ಕಾರ್ತಾಯಿನಿ ಅಮ್ಮ ಅವರ ಸಾವಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸಂತಾಪ ವ್ಯಕ್ತಪಡಿಸಿದ್ದಾರೆ. ಹತ್ತನೇ ತರಗತಿ ತೇರ್ಗಡೆಗೊಂಡು ಕೆಲಸ ಪಡೆಯಬೇಕು ಎಂದು ತಮ್ಮನ್ನು ಭೇಟಿ ಮಾಡಿದ ವೇಳೆ ಕಾರ್ತಾಯಿನಿ ಅಮ್ಮ ಆಸೆ ವ್ಯಕ್ತಪಡಿಸಿದ್ದನ್ನು ಪಿಣರಾಯಿ ನೆನಪಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT