ಸಾಂದರ್ಭಿಕ ಚಿತ್ರ 
ದೇಶ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ 'ಶಾಹಿದ್ ಲತೀಫ್' ಪಾಕಿಸ್ತಾನದಲ್ಲಿ ಹತ್ಯೆ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ ನಲ್ಲಿ ಬುಧವಾರ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ.

ನವದೆಹಲಿ: ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ ನಲ್ಲಿ ಬುಧವಾರ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಪ್ರಮುಖ ಸದಸ್ಯನಾಗಿದ್ದನು. ಭಾರತದಲ್ಲಿ 16 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ನಂತರ ಲತೀಫ್ ನನ್ನು 2010 ರಲ್ಲಿ ವಾಘಾ ಮೂಲಕ ಗಡಿಪಾರು ಮಾಡಲಾಯಿತು. 1994ರ ನವೆಂಬರ್ 12ರಂದು ಆತನನ್ನು ಬಂಧಿಸಲಾಗಿತ್ತು.

ಲತೀಫ್ ನನ್ನು ಭಾರತ ಸರ್ಕಾರವು ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಬೇಕಾಗಿದ್ದ. 1999ರಲ್ಲಿ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲೂ ಭಾಗಿಯಾಗಿದ್ದ.

2010 ರಲ್ಲಿ ಬಿಡುಗಡೆಯಾದ ನಂತರ ಲತೀಫ್ ಪಾಕಿಸ್ತಾನದ ಜಿಹಾದಿ ಕಾರ್ಖಾನೆಗೆ ಹಿಂತಿರುಗಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ತನಿಖೆ ಹೇಳುತ್ತದೆ. ಭಾರತ ಸರ್ಕಾರದಿಂದ ಆತನನ್ನು ಮೋಸ್ಟ್​ ವಾಂಟೆಡ್ ಭಯೋತ್ಪಾದಕ ಎಂದು ಪಟ್ಟಿ ಮಾಡಲಾಗಿತ್ತು.

41 ವರ್ಷದ ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಪ್ರಮುಖ ಸದಸ್ಯನಾಗಿದ್ದ. 2016ರ ಜನವರಿ 2ರಂದು ನಡೆದ ಪಠಾಣ್​ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದ. ಸಿಯಾಲ್‌ಕೋಟ್‌ನಿಂದ ದಾಳಿಯನ್ನು ಸಂಘಟಿಸಿ, ಅದನ್ನು ಕಾರ್ಯಗತಗೊಳಿಸಲು ನಾಲ್ವರು ಜೆಇಎಂ ಭಯೋತ್ಪಾದಕರನ್ನು ಪಠಾಣ್‌ಕೋಟ್‌ಗೆ ಕಳುಹಿಸಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT