ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ 9ನೇ ಜಿ20 ಸಂಸದೀಯ ಸ್ಪೀಕರ್‌ಗಳ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ 
ದೇಶ

ಸಂಘರ್ಷ, ಯುದ್ಧಗಳಿಂದ ಯಾರಿಗೂ ಪ್ರಯೋಜನವಿಲ್ಲ: ಪ್ರಧಾನಿ ನರೇಂದ್ರ ಮೋದಿ

ಇಂದು ಜಗತ್ತು ಎದುರಿಸುತ್ತಿರುವ ಸಂಘರ್ಷ ಮತ್ತು ಯುದ್ಧಗಳಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ಎಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, ಜಗತ್ತು ಮಾನವ ಕೇಂದ್ರಿತ ಧೋರಣೆಯೊಂದಿಗೆ ಮುನ್ನಡೆಯಬೇಕು ಎಂದು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಇಂದು ಜಗತ್ತು ಎದುರಿಸುತ್ತಿರುವ ಸಂಘರ್ಷ ಮತ್ತು ಯುದ್ಧಗಳಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ಎಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, ಜಗತ್ತು ಮಾನವ ಕೇಂದ್ರಿತ ಧೋರಣೆಯೊಂದಿಗೆ ಮುನ್ನಡೆಯಬೇಕು ಎಂದು ಶುಕ್ರವಾರ ಹೇಳಿದ್ದಾರೆ.

ಇಲ್ಲಿ ಒಂಬತ್ತನೇ ಜಿ20 ಸಂಸದೀಯ ಸ್ಪೀಕರ್‌ಗಳ ಶೃಂಗಸಭೆಯ (ಪಿ20) ಉದ್ಘಾಟನಾ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ನಂಬಿಕೆಯ ಹಾದಿಯಲ್ಲಿನ ಅಡೆತಡೆಗಳನ್ನು ನಾವು ತೆಗೆದುಹಾಕಬೇಕಾಗಿದೆ ಎಂದು ಹೇಳಿದರು.

ಇದು ಶಾಂತಿ ಮತ್ತು ಭ್ರಾತೃತ್ವದ ಸಮಯ ಮತ್ತು ಒಟ್ಟಿಗೆ ಮುನ್ನಡೆಯುವ ಸಮಯ ಎಂದು ಮೋದಿ ಹೇಳಿದರು.

ವಾರಾಂತ್ಯದಲ್ಲಿ ಹಮಾಸ್ ಉಗ್ರಗಾಮಿಗಳು ಇಸ್ರೇಲ್ ಪಟ್ಟಣಗಳ ಮೇಲೆ ನಡೆಸಿದ ಸರಣಿ ದಾಳಿಗಳ ಹಿನ್ನಲೆಯಲ್ಲಿ ಅವರ ಹೇಳಿಕೆಗಳು ಬಂದಿವೆ. 

ಸುಮಾರು 20 ವರ್ಷಗಳ ಹಿಂದೆ ಭಾರತದ ಸಂಸತ್ ಭವನದ ಮೇಲಿನ ದಾಳಿಯನ್ನು ಉಲ್ಲೇಖಿಸಿದ ಪ್ರಧಾನಿ, ಭಾರತವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುತ್ತಿದೆ. ಇದು ಸಾವಿರಾರು ಅಮಾಯಕರ ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಿದರು.

ಭಯೋತ್ಪಾದನೆ ಎಷ್ಟು ದೊಡ್ಡ ಸವಾಲು ಎಂಬುದನ್ನು ಜಗತ್ತು ಈಗ ಅರಿತುಕೊಳ್ಳುತ್ತಿದೆ. ಭಯೋತ್ಪಾದನೆ ಎಲ್ಲಿಯಾದರೂ, ಯಾವುದೇ ಅಭಿವ್ಯಕ್ತಿಯಲ್ಲಿದ್ದರೂ ಅದು ಮಾನವೀಯತೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.

'ನಾವು ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ಭಾವನೆಯಿಂದ ಜಗತ್ತನ್ನು ನೋಡಬೇಕು. ಜಾಗತಿಕ ಸವಾಲುಗಳನ್ನು ಎದುರಿಸಲು ಜನರ ಭಾಗವಹಿಸುವಿಕೆ ಅತ್ಯುತ್ತಮ ಮಾಧ್ಯಮವಾಗಿದೆ' ಎಂದು ಅವರು ಹೇಳಿದರು.

G20 ಅಧ್ಯಕ್ಷತೆಯು ವರ್ಷವಿಡೀ ಭಾರತದಲ್ಲಿ ಹಬ್ಬಗಳನ್ನು ಖಾತ್ರಿಪಡಿಸಿದೆ ಮತ್ತು ಈ ಆಚರಣೆಗೆ ಭಾರತವು ಚಂದ್ರನ ಮೇಲೆ ಇಳಿದಿರುವುದನ್ನು ಸೇರಿಸಿದೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT