ಜಲ ದರ್ಪಣ ಮಾಡಿ ವಿಶೇಷ ಪೂಜೆ ಸಲ್ಲಿಸುತ್ತಿರುವ ಭಕ್ತರು 
ದೇಶ

ಇಂದು ಮಹಾಲಯ ಅಮಾವಾಸ್ಯೆ: ಪಿತೃಪಕ್ಷದ ಕೊನೆಯ ದಿನ, ಹಿರಿಯರ ಸ್ಮರಣೆ!

ಇಂದು ಮಹಾಲಯ ಅಮಾವಾಸ್ಯೆ, 14 ದಿನಗಳ ಪಿತೃ ಪಕ್ಷದ ಕೊನೆಯ ದಿನವಾಗಿದ್ದು, ನಾಳೆಯಿಂದ ನವರಾತ್ರಿ ಆರಂಭವಾಗಲಿದೆ. ಪ್ರತಿ ವರ್ಷ ಭಾದ್ರಪದಮಾಸದಲ್ಲಿ ಬರುವ ಕೃಷ್ಣಪಕ್ಷವನ್ನು ಪಿತೃಪಕ್ಷ ಎನ್ನುವರು. ಇದು ಪಿತೃಪಕ್ಷದ ಕೊನೆಯಲ್ಲಿ ಬರುವುದರಿಂದ ಸರ್ವಪಿತೃ ಅಮಾವಾಸ್ಯೆಯೆಂದೂ ಕರೆಯಲಾಗುತ್ತದೆ.

ನವದೆಹಲಿ: ಇಂದು ಮಹಾಲಯ ಅಮಾವಾಸ್ಯೆ, 14 ದಿನಗಳ ಪಿತೃ ಪಕ್ಷದ ಕೊನೆಯ ದಿನವಾಗಿದ್ದು, ನಾಳೆಯಿಂದ ನವರಾತ್ರಿ ಆರಂಭವಾಗಲಿದೆ. ಪ್ರತಿ ವರ್ಷ ಭಾದ್ರಪದಮಾಸದಲ್ಲಿ ಬರುವ ಕೃಷ್ಣಪಕ್ಷವನ್ನು ಪಿತೃಪಕ್ಷ ಎನ್ನುವರು. ಇದು ಪಿತೃಪಕ್ಷದ ಕೊನೆಯಲ್ಲಿ ಬರುವುದರಿಂದ ಸರ್ವಪಿತೃ ಅಮಾವಾಸ್ಯೆಯೆಂದೂ ಕರೆಯಲಾಗುತ್ತದೆ.

ಅಗಲಿದ ಪಿತೃಗಳನ್ನು ನೇರವಾಗಿ ಸ್ಮರಿಸಲು ವರ್ಷದಲ್ಲೊಮ್ಮೆ ಪಿತೃಪಕ್ಷದಲ್ಲಿ ಅಥವಾ ಮಹಾಲಯ ಅಮಾವಾಸ್ಯೆಯನ್ನು ಆಚರಿಸುವುದು ರೂಢಿ. ಆ ದಿನ, ಅಗಲಿದವರನ್ನು ಸ್ಮರಿಸಿ, ತಿಲ ದರ್ಪಣವನ್ನು, ಜಲ ದರ್ಪಣವನ್ನು ಹಾಗೂ ಬಲಿಯನ್ನು, ಪಿಂಡವನ್ನು ನೀಡಿ ಸ್ಮರಿಸಲಾಗುತ್ತದೆ.

ಪ್ರಸಿದ್ಧ ಯಾತ್ರಾಸ್ಥಳಗಾದ ಉತ್ತರಾಖಂಡ್ ರಾಜ್ಯದ ಹರಿದ್ವಾರ, ಪಶ್ಚಿಮ ಬಂಗಾಳದ ಗಂಗಾಸಾಗರ ಸೇರಿದಂತೆ ದೇಶದ ಹಲವೆಡೆ ಬೆಳಗ್ಗೆಯಿಂದಲೇ ನದಿಯಲ್ಲಿ ಮುಳುಗಿ, ಜಲ ದರ್ಪಣ, ಪಿಂಡವನ್ನು ನೀಡಿ ಹಿರಿಯರನ್ನು ಸ್ಮರಿಸಲಾಗುತ್ತಿದೆ. ಹರಿದ್ವಾರದ ನಾರಾಯಣಿ ಶಿಲಾ ದೇವಾಲಯದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಮ್ಮ ಸನಾತನ ಧರ್ಮದ ಭಾಗವಾಗಿದ್ದು, ಮನಸ್ಸಿಗೆ ಶಾಂತಿ ನೀಡುತ್ತದೆ ಎಂದರು. 

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಗಂಗಾಸಾಗರದಲ್ಲಿ ಬೆಳಂ ಬೆಳಗ್ಗೆ ಆಗಮಿಸಿದ ಭಕ್ತರು ನದಿಯಲ್ಲಿ ಪವಿತ್ರ ಸ್ನಾನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT