ಚಂದ್ರಬಾಬು ನಾಯ್ಡು 
ದೇಶ

ಆಂಧ್ರಪ್ರದೇಶ: ಜೈಲಿನಲ್ಲಿ ಚಂದ್ರಬಾಬು ನಾಯ್ಡುಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಕೋರ್ಟ್ ಅನುಮತಿ 

ಕೌಶಲ್ಯಾಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಅಮರಾವತಿಯ ಸ್ಥಳೀಯ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.

ಅಮರಾವತಿ: ಕೌಶಲ್ಯಾಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಅಮರಾವತಿಯ ಸ್ಥಳೀಯ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ. ಈ ಸಂಬಂಧ ನಾಯ್ಡು ಪರ ವಕೀಲರ ತಂಡವು ಶನಿವಾರ ವಿಜಯವಾಡ ಎಸಿಬಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. 

"ರಾಜಮಹೇಂದ್ರವರಂನ ಸರ್ಕಾರಿ ಜನರಲ್ ಆಸ್ಪತ್ರೆಯ ವೈದ್ಯರ ತಂಡದ ವರದಿಯನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರ ಚರ್ಮದ ಸಮಸ್ಯೆ ತಡೆಯಲು ಅವರ ಕೋಣೆಯಲ್ಲಿ ಹವಾನಿಯಂತ್ರಣವನ್ನು ಶೀಘ್ರವಾಗಿ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಶನಿವಾರ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ನಾಯ್ಡು ಅವರನ್ನು ಪರೀಕ್ಷಿಸಿದ ವೈದ್ಯರ ತಂಡವು ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಆಸ್ಪತ್ರೆಗೆ ಸ್ಥಳಾಂತರಿಸುವ ಅಗತ್ಯವಿಲ್ಲ ಆದರೆ, ಹವಾನಿಯಂತ್ರಿತ ಸೌಲಭ್ಯದ ಅಗ್ಯವಿದೆ ಎಂದು ಹೇಳಿದ್ದರು. ಬಂಧನಕ್ಕೊಳಗಾದ ಒಂದು ತಿಂಗಳ ನಂತರ, ನ್ಯಾಯಾಲಯವು ನಾಯ್ಡುಗೆ ಹವಾನಿಯಂತ್ರಣ ಸೌಲಭ್ಯವನ್ನು ಅನುಮತಿಸಿದೆ.  ನಾಯ್ಡು ಅವರು ರಾಜಮಹೇಂದ್ರವರಂ ಸೆಂಟ್ರಲ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT