ಸಾಂದರ್ಭಿಕ ಚಿತ್ರ 
ದೇಶ

ತಿರುವಣ್ಣಾಮಲೈ: ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಲಾರಿ ನಡುವೆ ಡಿಕ್ಕಿ, 8 ಮಂದಿ ದುರ್ಮರಣ

ತಮಿಳುನಾಡಿನ ತಿರುವಣ್ಣಾಮಲೈನ ಚೆಂಗಂ ಬಳಿಯ ಅಂತನೂರ್ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈನ ಚೆಂಗಂ ಬಳಿಯ ಅಂತನೂರ್ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.

ತಿರುವಣ್ಣಾಮಲೈನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಎದುರುಗಡೆಯಿಂದ ಬಂದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿ ಕಾರಿನಲ್ಲಿ ಸಿಲುಕಿಕೊಂಡಿದ್ದ ಏಳು ಮೃತದೇಹಗಳನ್ನು ಹೊರತೆಗೆದೆದಿದ್ದಾರೆ. 

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರನ್ನು ತಿರುವಣ್ಣಾಮಲೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡಾ ಸಾವನ್ನಪ್ಪಿದ್ದಾರೆ.  ಅಪಘಾತದಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪುರುಷರು, ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ವರದಿಯಾಗಿದೆ.

ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂತ್ರಸ್ತರನ್ನು ಗುರುತಿಸುವ ಉದ್ದೇಶದಿಂದ ಚೆಂಗಮ್ ಪೊಲೀಸ್ ಅಧಿಕಾರಿಗಳು ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT