ಸುರೇಂದ್ರ ಕೋಲಿ ಮತ್ತು ಮಣಿಂದರ್ ಸಿಂಗ್ ಪಂಧಾರ್ 
ದೇಶ

ನಿತಾರಿ ಹತ್ಯಾಕಾಂಡ: ಪ್ರಮುಖ ಆರೋಪಿ ಕೋಲಿ, ಪಂಧೇರ್ ಖುಲಾಸೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ನಿತಾರಿ ಅತ್ಯಾಚಾರ ಮತ್ತು ನಿಗೂಢ ಸರಣಿ ಕೊಲೆ ಪ್ರಕರಣದ ಪ್ರಮುಖ ಆರೋಪಗಳಾದ ಸುರೇಂದ್ರ ಕೋಲಿ ಮತ್ತು ಮಣಿಂದರ್ ಸಿಂಗ್ ಪಂಧಾರ್ ಅವರನ್ನು ಅಲಹಾಬಾದ್ ಹೈಕೋರ್ಟ್​ ಸೋಮವಾರ ಖುಲಾಸೆಗೊಳಿಸಿದೆ.

ಪ್ರಯಾಗ್ರಾಜ್ (ಯುಪಿ): ನಿತಾರಿ ಅತ್ಯಾಚಾರ ಮತ್ತು ನಿಗೂಢ ಸರಣಿ ಕೊಲೆ ಪ್ರಕರಣದ ಪ್ರಮುಖ ಆರೋಪಗಳಾದ ಸುರೇಂದ್ರ ಕೋಲಿ ಮತ್ತು ಮಣಿಂದರ್ ಸಿಂಗ್ ಪಂಧಾರ್ ಅವರನ್ನು ಅಲಹಾಬಾದ್ ಹೈಕೋರ್ಟ್​ ಸೋಮವಾರ ಖುಲಾಸೆಗೊಳಿಸಿದೆ.

2007ರಲ್ಲಿ ಉದ್ಯಮಿ ಪಂಧೇರ್ ಮತ್ತು ಆತನ ಮನೆಕೆಲಸದಾತ ಕೋಲಿ ವಿರುದ್ಧ 19 ಪ್ರಕರಣಗಳು ದಾಖಲಾಗಿದ್ದವು. ಅತ್ಯಾಚಾರ ಮತ್ತು ಕೊಲೆ ಆರೋಪ ಪ್ರಕರಣ ಸಂಬಂಧ ಇಬ್ಬರಿಗೂ ಮರಣದಂಡನೆ ವಿಧಿಸಲಾಗಿತ್ತು.

ದಾಖಲಾದ ಒಟ್ಟು 19 ಪ್ರಕರಣಗಳಲ್ಲಿ ಸಿಬಿಐ 16 ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದ ಮೂರು ಪ್ರಕರಣಗಳು ರದ್ದುಗೊಂಡಿದ್ದವು.

ಡಿಸೆಂಬರ್ 29, 2006 ರಂದು ನೋಯ್ಡಾದ ನಿಥಾರಿಯಲ್ಲಿರುವ ಪಂಧೇರ್ ಅವರ ಮನೆಯ ಸಮೀಪದ ಚರಂಡಿಯಲ್ಲಿ ಕಾಣೆಯಾದ ಬಾಲಕಿ ಸೇರಿದಂತೆ ಇತರರ ಅಸ್ಥಿಪಂಜರವನ್ನು ವಶಪಡಿಸಿಕೊಂಡಿದ್ದರು.

2005ರಲ್ಲಿ ನೋಯ್ಡಾದ ಸೆಕ್ಟರ್ 31ರಲ್ಲಿ ಇರುವ ಕೊಲಿಯ ಉದ್ಯೋಗದಾತ ಮೊಂನೀದರ್ ಸಿಂಗ್ ಪಂದೇರ್ ಮನೆ ಹೊರಗಿಂದ ಬಾಲಕಿ ಕಾಣೆಯಾಗಿದ್ದಳು. ಈ ಸಂಬಂಧ ಆಕೆಯ ತಂದೆ ಸ್ಥಳೀಯ ಪೊಲೀಸರಲ್ಲಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಪಂಧೇರ್ ಹಾಗೂ ಕೋಲಿಯನ್ನು ಬಂಧನಕ್ಕೊಳಪಡಿಸಿದ್ದ ಪೊಲೀಸರು, ಪರಿಶೀಲನೆ ವೇಳೆ ಪಂಧೇರ್ ಅವರ ಮನೆಯ ಚರಂಡಿಯಲ್ಲಿ ನಾಪತ್ತೆಯಾದ ಬಾಲಕಿ ಸೇರಿದಂತೆ ಇತರರ ಅಸ್ಥಿಪಂಜರಗಳನ್ನು ವಶಪಡಿಸಿಕೊಂಡಿದ್ದರು.

ಈ ಅಸ್ಥಿಪಂಚರಗಳು ಈ ಪ್ರದೇಶದಿಂದ ನಾಪತ್ತೆಯಾಗಿದ್ದ ಬಡ ಮಕ್ಕಳು ಹಾಗೂ ಯುವತರಿಯರದ್ದಾಗಿದ್ದು ಎಂದು ತಿಳಿದುಬಂದಿತ್ತು.

ಅಸ್ಥಿಪಂಚರಗಳು ಪತ್ತೆಯಾದ 10 ದಿನಗಳಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಇದಾದ ಬಳಿಕ ಮತ್ತಷ್ಟು ಅಸ್ಥಿಪಂಜರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT