ರಾಹುಲ್ ಗಾಂಧಿ. 
ದೇಶ

ಪ್ರಧಾನಿ ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್ ಬಗ್ಗೆಯೇ ಹೆಚ್ಚು ಕಾಳಜಿ: ರಾಹುಲ್ ಗಾಂಧಿ

ಜನಾಂಗೀಯ ಸಂಘರ್ಷದಿಂದ ನಲುಗಿರುವ ಮಣಿಪುರಕ್ಕಿಂತ ಇಸ್ರೇಲ್‌ ರಾಷ್ಟ್ರದ ಬಗ್ಗೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೆಚ್ಚು ಕಾಳಜಿ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕಿಡಿಕಾರಿದ್ದಾರೆ.

ಐಝ್ವಾಲ್:  ಜನಾಂಗೀಯ ಸಂಘರ್ಷದಿಂದ ನಲುಗಿರುವ ಮಣಿಪುರಕ್ಕಿಂತ ಇಸ್ರೇಲ್‌ ರಾಷ್ಟ್ರದ ಬಗ್ಗೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೆಚ್ಚು ಕಾಳಜಿ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕಿಡಿಕಾರಿದ್ದಾರೆ.

ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಐಝ್ವಾಲ್'ನಲ್ಲಿ ಪಾದಯಾತ್ರೆ ಕೈಗೊಂಡಿದ್ದಾರೆ.

ಪಾದಯಾತ್ರೆ ವೇಳೆ ಇಲ್ಲಿನ ರಾಜಭವನದ ಬಳಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಆವರು, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

1986ರಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವುದರೊಂದಿಗೆ ಗಲಭೆ ಪೀಡಿತ ಈಶಾನ್ಯ ರಾಜ್ಯದಲ್ಲಿ ಕಾಂಗ್ರೆಸ್ ಶಾಂತಿ ಸ್ಥಾಪಿಸಿತ್ತು. ಆದರೀಗ ಮಣಿಪುರ ಏಕೀಕೃತ ರಾಜ್ಯವಾಗಿ ಉಳಿದಿಲ್ಲ. ಜನಾಂಗೀಯ ಆಧಾರದ ಮೇಲೆ ಎರಡು ರಾಜ್ಯಗಳಾಗಿ ವಿಂಗಡಿಸಲಾಗಿದೆ.

ಮಣಿಪುರದ ಬದಲಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರಕ್ಕೆ ಇಸ್ರೇಲ್ (ಇಸ್ರೇಲ್-ಹಮಾಸ್ ಸಂಘರ್ಷ)ನಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆಯೇ ಹೆಚ್ಚು ಕಾಳಜಿಯಿದೆ. ಮಣಿಪುರದ ಬಗ್ಗೆ ಇವರಿಗೆ ಆಸಕ್ತಿಯಿಲ್ಲ. ಮಣಿಪುರದಲ್ಲಿ ಜನರು ಹತ್ಯೆಗೀಡಾಗಿದ್ದರು. ಮಹಿಳೆಯರಿಗೆ ಕಿರುಕುಳ ನೀಡಲಾಗಿತ್ತು. ಮಕ್ಕಳನ್ನು ಹತ್ಯೆ ಮಾಡಲಾಗಿತ್ತು ಎಂದು ಹೇಳಿದರು.

 ಪರಸ್ಪರ ಗೌರವಿಸುವುದು, ಇತರೆ ವಿಚಾರಗಳು, ಧರ್ಮಗಳು, ಭಾಷೆಗಳ ಕಲಿಯುವುದು, ತನ್ನನ್ನು ತಾನು ಪ್ರೀತಿಸುವುದು ನಮ್ಮ ಕಲ್ಪನೆಯಾಗಿದೆ. ಇವುಗಳ ಮೇಲೆ ಬಿಜೆಪಿಯ ದಾಳಿಯಾಗುತ್ತಿದೆ. ವಿವಿಧ ಸಮುದಾಯಗಳು, ಧರ್ಮಗಳು, ಭಾಷೆಗಳ ಮೇಲೆ ಅವರು ದಾಳಿ ಮಾಡುತ್ತಿದ್ದಾರೆ. ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದ್ದಾರೆ. ಇದು ಭಾರತದ ಕಲ್ಪನೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ತಿಳಿಸಿದರು.

40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT