ಮೀನುಗಾರರ ಮುಷ್ಕರ 
ದೇಶ

ರಾಮೇಶ್ವರಂ: ಲಂಕಾದಿಂದ 27 ಮೀನುಗಾರರ ಬಂಧನ, ಬಿಡುಗಡೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ

ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿರುವ ರಾಮೇಶ್ವರಂ ಮೀನುಗಾರರು ಮತ್ತು ದೋಣಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಮೇಶ್ವರಂನ ಮೀನುಗಾರರ ಸಂಘಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ.ದೋಣಿಗಳು ಬಂದ್ ಆಗಿದ್ದು, ಮೀನುಗಾರರು ಮೀನುಗಾರಿಕೆಗೆ ತೆರಳಿಲ್ಲ.

ರಾಮೇಶ್ವರಂ: ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿರುವ ರಾಮೇಶ್ವರಂ ಮೀನುಗಾರರು ಮತ್ತು ದೋಣಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಮೇಶ್ವರಂನ ಮೀನುಗಾರರ ಸಂಘಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ. ದೋಣಿಗಳು ಬಂದ್ ಆಗಿದ್ದು, ಮೀನುಗಾರರು ಮೀನುಗಾರಿಕೆಗೆ ತೆರಳಿಲ್ಲ.

ಅಕ್ಟೋಬರ್ 14 ರಂದು 400 ಕ್ಕೂ ಹೆಚ್ಚು ದೋಣಿಗಳಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿದಾಗ ಶ್ರೀಲಂಕಾ ನೌಕಪಡೆ 27 ಮೀನುಗಾರರೊಂದಿಗೆ 5 ದೋಣಿಗಳನ್ನು ವಶಕ್ಕೆ ಪಡೆದು ತಲೈಮನ್ನಾರ್ ಮತ್ತು ಕಂಕೆಸಂತುರೈ ಬಂದರಿಗೆ ಕರೆದೊಯ್ದು, ಮುಂದಿನ ಕಾನೂನು ಕ್ರಮಕ್ಕಾಗಿ ತಲೈಮನ್ನಾರ್ ಮತ್ತು ಜಾಫ್ನಾ ಕಡಲಿನ ಇನ್ಸ್ ಪೆಕ್ಟರ್ ಗೆ ಹಸ್ತಾಂತರಿಸಿತು ಎಂದು ತಮಿಳುನಾಡು ದೋಣಿ ಮೀನುಗಾರರ ಕಲ್ಯಾಣ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಜೆ. ಬೋಸ್ ಹೇಳಿದ್ದಾರೆ, 

ಈ ಹಿಂದೆ, ಶ್ರೀಲಂಕಾದ ನೌಕಾಪಡೆಯು ಸೆಪ್ಟೆಂಬರ್ 13 ರಂದು ಒಳನಾಡಿನಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದ ಮೇರೆಗೆ 17 ಮೀನುಗಾರರನ್ನು ಮತ್ತು 3 ದೋಣಿಗಳನ್ನು ಬಂಧಿಸಿತ್ತು. ಈ ಸಂಬಂದ ಶ್ರೀಲಂಕಾ ನೌಕಪಡೆಯಿಂದ ಭಾರತೀಯ ಮೀನುಗಾರರನ್ನು ರಕ್ಷಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ತಮಿನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT