ಅಕ್ರಮ ಹಣ ವರ್ಗಾವಣೆ 
ದೇಶ

ಕೇಂದ್ರ ನೌಕರರಿಗೆ ದೀಪಾವಳಿ ಉಡುಗೊರೆ: ಶೇ.4ರಷ್ಟು ಡಿಎ ಹೆಚ್ಚಳ, ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಘೋಷಣೆ!

ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಸಂಪುಟವು ನೌಕರರ ತುಟ್ಟಿಭತ್ಯೆ (ಡಿಎ) ಯಲ್ಲಿ ನಾಲ್ಕು ಪ್ರತಿಶತ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಭತ್ಯೆ ಹೆಚ್ಚಳದ ನಂತರ ನೌಕರರ ಡಿಎ ಶೇ 42ರಿಂದ 46ಕ್ಕೆ ಏರಿಕೆಯಾಗಿದೆ.

ನವದೆಹಲಿ: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಸಂಪುಟವು ನೌಕರರ ತುಟ್ಟಿಭತ್ಯೆ (ಡಿಎ) ಯಲ್ಲಿ ನಾಲ್ಕು ಪ್ರತಿಶತ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಭತ್ಯೆ ಹೆಚ್ಚಳದ ನಂತರ ನೌಕರರ ಡಿಎ ಶೇ 42ರಿಂದ 46ಕ್ಕೆ ಏರಿಕೆಯಾಗಿದೆ. 

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಹೆಚ್ಚಿದ ಡಿಎ ಜುಲೈ 1ರಿಂದ ಅನ್ವಯವಾಗಲಿದೆ. ಇದರಿಂದ ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳ ಡಿಎಯನ್ನು ವರ್ಷಕ್ಕೆ ಎರಡು ಬಾರಿ ಬದಲಾಯಿಸುತ್ತದೆ. ಇದಕ್ಕೂ ಮುನ್ನ ಜನವರಿಯಿಂದ ಡಿಎಯನ್ನು ಶೇಕಡಾ ನಾಲ್ಕು ರಷ್ಟು ಹೆಚ್ಚಿಸಲಾಗಿತ್ತು. ಅಲ್ಲದೆ, ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ಕಾರ್ಯಕ್ಷಮತೆ ಸಂಬಂಧಿತ ಬೋನಸ್ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 1,969 ಕೋಟಿ ರೂ. ಇದರಿಂದ 11 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರಿಗೆ ಅನುಕೂಲವಾಗಲಿದೆ.

ಏಳನೇ ವೇತನ ಆಯೋಗದ ಶಿಫಾರಸುಗಳಿಗೆ ಅನುಗುಣವಾಗಿ ಕೇಂದ್ರ ನೌಕರರ ಡಿಎ ಹೆಚ್ಚಳ ಮಾಡಲಾಗಿದೆ. ಇದರಿಂದ 48.67 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 67.95 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಡಿಎ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 12,857 ಕೋಟಿ ಹೊರೆ ಬೀಳಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ನಂತರ ಸುದ್ದಿಗಾರರಿಗೆ ತಿಳಿಸಿದರು.

ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಮತ್ತು ಸಿಸಿಇಎ ಸಭೆಯಲ್ಲಿ ಇಂದು ನಾಲ್ಕು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ನೌಕರರ ಡಿಎ ಶೇ.42ರಿಂದ ಶೇ.46ಕ್ಕೆ ಏರಿಕೆಯಾಗಿದೆ. ಅಲ್ಲದೆ, 11 ಲಕ್ಷಕ್ಕೂ ಹೆಚ್ಚು ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ಬೋನಸ್ ನೀಡಲು ನಿರ್ಧರಿಸಲಾಗಿದೆ. ಮೂರನೇ ನಿರ್ಧಾರ ರೈತರಿಗೆ ಸಂಬಂಧಿಸಿದ್ದು. ಆರು ಬೆಳೆಗಳ ಎಂಎಸ್‌ಪಿ ಹೆಚ್ಚಿಸಲಾಗಿದೆ. ಎಣ್ಣೆಕಾಳು ಮತ್ತು ಸಾಸಿವೆ ಬೆಲೆ 200 ರೂ., ಉದ್ದಿನಬೇಳೆ 425 ರೂ., ಗೋಧಿ 150 ರೂ., ಬಾರ್ಲಿ 115 ರೂ., ಬೇಳೆ 105 ರೂ., ಸೂರ್ಯಕಾಂತಿ ಕ್ವಿಂಟಲ್‌ಗೆ 150 ರೂಪಾಯಿ ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

PUNE: ಬಿಜೆಪಿ ಭಾರತವನ್ನು ನರಕವಾಗಿಸಿದೆ; ರಾಮದಾಸ್ ಕದಮ್ 'ದ್ರೋಹಿ' ಎಂದ ಉದ್ಧವ್ ಠಾಕ್ರೆ!

Bengaluru: ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲು!

SCROLL FOR NEXT