ಕೇರಳ ಮಹಿಳೆ (ಸಂಗ್ರಹ ಚಿತ್ರ) 
ದೇಶ

ಇಸ್ರೆಲ್ ನ ಅನಾರೋಗ್ಯ ಪೀಡಿತ ದಂಪತಿಯನ್ನು ಹಮಾಸ್ ಭಯೋತ್ಪಾದಕರಿಂದ ರಕ್ಷಿಸಿದ 'ಇಂಡಿಯನ್ ಸೂಪರ್ ವುಮನ್'!

ಇಸ್ರೇಲ್ ನ ಅನಾರೋಗ್ಯ ಪೀಡಿತ ದಂಪತಿಗಳ ಕಾಳಜಿ ವಹಿಸಲು ನಿಯುಕ್ತಿಗೊಂಡಿರುವ ಕೇರಳದ ಇಬ್ಬರು ಮಹಿಳೆಯರು ದಂಪತಿಗಳ ಜೀವ ಉಳಿಸಿದ್ದಾರೆ.

ನವದೆಹಲಿ: ಇಸ್ರೇಲ್ ನ ಅನಾರೋಗ್ಯ ಪೀಡಿತ ದಂಪತಿಗಳ ಕಾಳಜಿ ವಹಿಸಲು ನಿಯುಕ್ತಿಗೊಂಡಿರುವ ಕೇರಳದ ಇಬ್ಬರು ಮಹಿಳೆಯರು ದಂಪತಿಗಳ ಜೀವ ಉಳಿಸಿದ್ದಾರೆ.

ಅ.07 ರಂದು ಇಸ್ರೇಲಿಗಳ ಹಬ್ಬದ ಸಂದರ್ಭದಲ್ಲಿ ನಡೆದ ದಾಳಿಯ ವೇಳೆ ಕೇರಳದ ಮಹಿಳೆಯರು ಹಮಾಸ್ ಉಗ್ರರಿಂದ ವೃದ್ಧ ದಂಪತಿಯ ಜೀವ ಉಳಿಸಿ ಮಾನವಿಯತೆ ಮೆರೆದಿದ್ದಾರೆ. 

ಭಾರತದಲ್ಲಿರುವ ಇಸ್ರೇಲ್ ನ ರಾಯಭಾರ ಕಚೇರಿ ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಇಬ್ಬರು ಕೇರಳಿಗರಾದ ಸಬಿತಾ, ಮೀರಾ ಮೋಹನನ್ ಅವರನ್ನು ಭಾರತದ ಸೂಪರ್ ವುಮೆನ್ ಎಂದು ಬಣ್ಣಿಸಿ ಧನ್ಯವಾದ ತಿಳಿಸಿದೆ.

ಇಸ್ರೆಲ್ ನ ರಾಯಭಾರ ಕಚೇರಿ ಘಟನೆ ಬಗ್ಗೆ ಸಬೀತಾ ಅವರ ಮಾತುಗಳಿರುವ ವೀಡಿಯೋವನ್ನು ಹಂಚಿಕೊಂಡಿದೆ.

ತಮ್ಮೆಡೆಗೆ ಗುಂಡಿನ ದಾಳಿ ನಡೆಯುತ್ತಿದ್ದರೂ ಈ ಇಬ್ಬರೂ ಮಹಿಳೆಯರು ತಾವಿದ್ದ ಮನೆಯ ಸುರಕ್ಷಾ ಕೊಠಡಿಯ ಬಾಗಿಲ ಹಿಡಿಯನ್ನು ಭದ್ರವಾಗಿ ಹಿಡಿದು ಹಮಾಸ್ ಉಗ್ರರು ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ.

ಇದನ್ನೂ ಓದಿ: ಯುದ್ಧ ಪೀಡಿತ ಗಾಜಾದಲ್ಲಿ ಆಹಾರ, ನೀರಿಗೆ ಹಾಹಾಕಾರ, ನೆರವಿನ ಹಸ್ತ ಚಾಚಿದ ಭಾರತೀಯ ಮೂಲದ 'ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿ'
 
ತಾವು ಕಾಳಜಿ ವಹಿಸುತ್ತಿದ್ದ ವೃದ್ಧ ದಂಪತಿಗಳ ಪೈಕಿ ಮಹಿಳೆಗೆ ಅಮಿಯೋಟ್ರೋಫಿಕ್ ಲ್ಯಾಟರಲ್ ಸ್ಕ್ಲೆರೋಸಿಸ್ (ಎಎಲ್ಎಸ್) ಎಂಬ ಆರೋಗ್ಯ ಸಮಸ್ಯೆ ಇತ್ತು ಎಂದು ಸಬಿತಾ ತಿಳಿಸಿದ್ದಾರೆ. ಬೆಳಿಗ್ಗೆ 6:30 ರ ವೇಳೆಗೆ ಸೈರನ್ ಮೊಳಗಿದ್ದನ್ನು ಕೇಳಿದ ಸಬಿತಾ ಸುರಕ್ಷಾ ಕೊಠಡಿಗೆ ತೆರಳಿದ್ದಾರೆ. 

ಈ ಬಳಿಕ ವೃದ್ಧ ದಂಪತಿಯ ಮಗಳು ಕರೆ ಮಾಡಿ ಆ ಪ್ರದೇಶದಲ್ಲಿ (ಗಾಜಾ ಪಟ್ಟಿ ಗಡಿ) ಯಲ್ಲಿನ ಪರಿಸ್ಥಿತಿ ಕೈ ಮೀರಿ ಹೋಗಿದೆ ಎಂದು ತಿಳಿಸಿ, ಮನೆಯ ಎಲ್ಲಾ ಬಾಗಿಲನ್ನು ಲಾಕ್ ಮಾಡಲು ಸೂಚಿಸಿದ್ದಾರೆ. “ಇದಾದ ಕೆಲವೇ ನಿಮಿಷಗಳಲ್ಲಿ ಭಯೋತ್ಪಾದಕರು ಮನೆಗೆ ನುಗ್ಗಿ ಗುಂಡು ಹಾರಿಸಿ ಗಾಜು ಒಡೆಯುವ ಶಬ್ದ ಕೇಳಿದೆ.
 
ಈ ಹಂತದಲ್ಲಿ ಸಬಿತಾ ಪುನಃ ವೃದ್ಧ ದಂಪತಿಯ ಮಗಳಿಗೆ ಕರೆ ಮಾಡಿ ಏನು ಮಾಡಬೇಕೆಂದು ಕೇಳಿದ್ದಾರೆ. "ಸುರಕ್ಷಾ ಕೊಠಡಿಯ ಬಾಗಿಲ ಹ್ಯಾಂಡಲ್ ನ್ನು ಭದ್ರವಾಗಿ ಹಿಡಿದುಕೊಂಡು ಒಳಗೆ ಯಾರೂ ಬರದಂತೆ ತಡೆಯಲು ಸೂಚಿಸಿದ್ದಾರೆ. ಅಂತಯೇ ಗುಂಡಿನ ದಾಳಿಗಳ ನಡುವೆಯೂ ಧೃತಿಗೆಡದ ಮಹಿಳೆಯರು ವೃದ್ಧ ದಂಪತಿಯನ್ನು ಭಯೋತ್ಪಾದಕರಿಂದ ರಕ್ಷಿಸಿದ್ದಾರೆ. ಈ ಇಬ್ಬರೂ ಕಳೆದ 3 ವರ್ಷಗಳಿಂದ ಇಸ್ರೇಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT