ದ್ಯುತಿ ಚಂದ್ 
ದೇಶ

ಸಲಿಂಗ ವಿವಾಹ ಮುಂದೊಂದು ದಿನ ವಾಸ್ತವವಾಗಲಿದೆ: ಕ್ರೀಡಾಪಟು ದ್ಯುತಿ ಚಂದ್

ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಅವರು ಸಲಿಂಗ ವಿವಾಹದ ಬಗ್ಗೆ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಅವರು ಸಲಿಂಗ ವಿವಾಹದ ಬಗ್ಗೆ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದ ಹಿನ್ನೆಲೆಯಲ್ಲಿ ದ್ಯುತಿ ಚಂದ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವಿಶೇಷ ವಿವಾಹ ಕಾಯಿದೆ (Special Marriage Act)ಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ. ಅದನ್ನು ನಾವು ವ್ಯಾಖ್ಯಾನಿಸಬಹುದು, ಆದರೆ ಅದನ್ನು ಬದಲಾಯಿಸುವುದು ಸಂಸತ್ತು ಅಂದರೆ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಇದನ್ನೂ ಓದಿ: ಸಲಿಂಗ ವಿವಾಹ ಕಾನೂನು ತರುವ ಜವಾಬ್ದಾರಿ ಸಂಸತ್ತಿನದ್ದು, ನ್ಯಾಯಾಲಯ ಕೇವಲ ವ್ಯಾಖ್ಯಾನಿಸಬಹುದು: ಸಿಜೆಐ ಚಂದ್ರಚೂಡ್
 
ಸಲಿಂಗಿಗಳು ಒಟ್ಟಿಗೆ ಇರುವುದನ್ನು ಸುಪ್ರೀಂ ಕೋರ್ಟ್ ತಡೆದಿಲ್ಲ. ಸಲಿಂಗಿಗಳ ವಿವಾಹಕ್ಕೆ ಸಂಬಂಧಿಸಿದಂತೆ ಕಾನೂನು ಇಲ್ಲದೇ ಇರುವುದರಿಂದ ಅದರಲ್ಲಿ ಮಧ್ಯಪ್ರವೇಶಿಸುವುದಕ್ಕೆ ಸಾಧ್ಯವಿಲ್ಲ ಎಂದಷ್ಟೇ ಹೇಳಿದೆ ಎಂದು ದ್ಯುತಿ ಚಂದ್ ಹೇಳಿದ್ದಾರೆ. 

"ಕೇಂದ್ರ ಸರ್ಕಾರ ಮತ್ತು ಸಂಸತ್ತು ಖಂಡಿತವಾಗಿಯೂ ಪ್ರಕರಣವನ್ನು ಪರಿಗಣಿಸುತ್ತದೆ ಮತ್ತು ಭವಿಷ್ಯದಲ್ಲಿ ಸಲಿಂಗ ವ್ಯಕ್ತಿಗಳ ನಡುವಿನ ವಿವಾಹಕ್ಕೆ ಸರಿಯಾದ ಕಾನೂನು ಮಾಡುತ್ತದೆ ಎಂದು ನಾವು ಆಶಾವಾದಿಗಳಾಗಿದ್ದೇವೆ" ಎಂದು ಚಂದ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT