ಉತ್ತರ ಸಿಕ್ಕಿಂನಲ್ಲಿ ತೀಸ್ತಾ ನದಿಯಿಂದಾಗಿ ಪ್ರವಾಹ 
ದೇಶ

ಸಿಕ್ಕಿಂ ಪ್ರವಾಹ: ಮೃತರ ಸಂಖ್ಯೆ 40ಕ್ಕೆ ಏರಿಕೆ, ಎರಡು ವಾರಗಳ ನಂತರವೂ 76 ಜನ ಇನ್ನೂ ನಾಪತ್ತೆ!

ಇನ್ನೂ ಎರಡು ಶವಗಳು ಪತ್ತೆಯಾಗುವುದರೊಂದಿಗೆ ಸಿಕ್ಕಿಂನಲ್ಲಿನ ಪ್ರವಾಹದಲ್ಲಿ ಮೃತರ ಸಂಖ್ಯೆ 40ಕ್ಕೆ ಏರಿದೆ. ಆದರೆ, ದುರಂತ ಸಂಭವಿಸಿ ಎರಡು ವಾರಗಳ ನಂತರವೂ ಇನ್ನೂ 76 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ಯಾಂಗ್ಟಕ್: ಇನ್ನೂ ಎರಡು ಶವಗಳು ಪತ್ತೆಯಾಗುವುದರೊಂದಿಗೆ ಸಿಕ್ಕಿಂನಲ್ಲಿನ ಪ್ರವಾಹದಲ್ಲಿ ಮೃತರ ಸಂಖ್ಯೆ 40ಕ್ಕೆ ಏರಿದೆ. ಆದರೆ, ದುರಂತ ಸಂಭವಿಸಿ ಎರಡು ವಾರಗಳ ನಂತರವೂ ಇನ್ನೂ 76 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಟೋಬರ್ 4ರ ಮುಂಜಾನೆ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದಾಗಿ ರಾಜ್ಯದಲ್ಲಿ ಭಾರಿ ಹಾನಿಯುಂಟುಮಾಡಿತು. ಸುಮಾರು 88,000 ಜನರ ಮೇಲೆ ಪ್ರವಾಹ ಪರಿಣಾಮ ಬೀರಿತು.

ಸಿಕ್ಕಿಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‌ಎಸ್‌ಡಿಎಂಎ) ಪ್ರಕಾರ, ಜಿಲ್ಲೆಯಲ್ಲಿ ಪತ್ತೆಯಾದ 26 ಮೃತದೇಹಗಳಲ್ಲಿ 15 ನಾಗರಿಕರು ಮತ್ತು 11 ಮಂದಿ ಸೈನಿಕರು ಸೇರಿದ್ದಾರೆ. ಮಂಗನ್‌ನಲ್ಲಿ ನಾಲ್ಕು, ಗ್ಯಾಂಗ್ಟಕ್‌ನಲ್ಲಿ ಎಂಟು ಮತ್ತು ನಾಮ್ಚಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಬುಲೆಟಿನ್‌ನಲ್ಲಿ ತಿಳಿಸಿದೆ. 

ನೆರೆಯ ಪಶ್ಚಿಮ ಬಂಗಾಳದಲ್ಲಿಯೂ ಹಲವಾರು ಶವಗಳು ಪತ್ತೆಯಾಗಿವೆ. ಪ್ರವಾಹವು ತೀಸ್ತಾ ನದಿಯ ಕೆಳಭಾಗದ ಪ್ರದೇಶಗಳಿಗೆ ಶವಗಳನ್ನು ಎಳೆದೊಯ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಪತ್ತೆಯಾದ 76 ಜನರಲ್ಲಿ 28 ಮಂದಿ ಪಾಕ್ಯೊಂಗ್‌ನಿಂದ, 23 ಮಂದಿ ಗ್ಯಾಂಗ್‌ಟಾಕ್‌ನಿಂದ, 20 ಮಂದಿ ಮಂಗನ್‌ನಿಂದ ಮತ್ತು ಐವರು ನಾಮ್ಚಿಯವರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 20 ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿದ್ದು, 2,080 ಜನರು ಆಶ್ರಯ ಪಡೆದಿದ್ದಾರೆ ಎಂದು ಎಸ್‌ಎಸ್‌ಡಿಎಂಎ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT