ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಮೂರು ಜಿಲ್ಲೆಗಳಲ್ಲಿ ಆರ್‌ಎಸ್‌ಎಸ್ ರ‍್ಯಾಲಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್

ತಮಿಳುನಾಡಿನ ಮಧುರೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಇದೇ  22 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ರ‍್ಯಾಲಿ ನಡೆಸಲು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಅನುಮತಿ ನಿರಾಕರಿಸಿದೆ.

ಚೆನ್ನೈ: ತಮಿಳುನಾಡಿನ ಮಧುರೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಇದೇ  22 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ರ‍್ಯಾಲಿ ನಡೆಸಲು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಅನುಮತಿ ನಿರಾಕರಿಸಿದೆ.

ಆದಾಗ್ಯೂ, ಅಕ್ಟೋಬರ್ 22 ರಂದು 11 ಜಿಲ್ಲೆಗಳಲ್ಲಿ ಮೆರವಣಿಗೆ ನಡೆಸಲು ಆರ್‌ಎಸ್‌ಎಸ್‌ಗೆ ಅನುಮತಿ ನೀಡಿದೆ. ಮಧುರೈ ಸೇರಿದಂತೆ ದಕ್ಷಿಣದ 14 ಜಿಲ್ಲೆಗಳ 20 ಸ್ಥಳಗಳಲ್ಲಿ 22 ರಿಂದ 29ರವರೆಗೂ ಆರ್‌ಎಸ್‌ಎಸ್  ರ‍್ಯಾಲಿ ನಡೆಸಲು ಅನುಮತಿ ನೀಡುವಂತೆ ಕೋರಿ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಮಧುರೈ, ತಂಜಾವೂರು, ತಿರುಚ್ಚಿ, ದಿಂಡಿಗಲ್, ತೇಣಿ, ಪುದುಕೊಟ್ಟೈ, ಕರೂರ್, ತಿರುನಲ್ವೇಲಿ, ತೂತುಕುಡಿ, ತೆಂಕಶಿ, ವಿರುಧುನಗರ, ಶಿವಗಂಗೈ, ರಾಮನಾಥಪುರಂ, ಕನ್ಯಾಕುಮಾರಿ ಸೇರಿದಂತೆ 14 ಜಿಲ್ಲೆಗಳಲ್ಲಿ ರ‍್ಯಾಲಿ ನಡೆಸಲು ಅನುಮತಿ ನೀಡುವಂತೆ ಮನವಿಯಲ್ಲಿ ಕೋರಲಾಗಿತ್ತು. ಆದಾಗ್ಯೂ, 11 ಜಿಲ್ಲೆಗಳಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡಲಾಗಿದ್ದು, ಮೂರು ಜಿಲ್ಲೆಗಳಲ್ಲಿ ಅನುಮತಿ ನಿರಾಕರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT