ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ 
ದೇಶ

NewsClick ಪ್ರಕರಣ: ಪುರಕಾಯಸ್ಥ, ಚಕ್ರವರ್ತಿಗೆ ಮತ್ತೆ 5 ದಿನಗಳ ಕಾಲ ನ್ಯಾಯಾಂಗ ಬಂಧನ

ನ್ಯೂಸ್ ಪೋರ್ಟಲ್‌ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ಐದು ದಿನಗಳ ಕಾಲ ವಿಸ್ತರಿಸಿದೆ.  

ಮುಂಬೈ: ನ್ಯೂಸ್ ಪೋರ್ಟಲ್‌ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ಐದು ದಿನಗಳ ಕಾಲ ವಿಸ್ತರಿಸಿದೆ.  

ಭಯೋತ್ಪಾದನಾ ನಿಗ್ರಹ ಕಾನೂನು ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರ ಬಂಧನವಾಗಿತ್ತು. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಈ ಇಬ್ಬರೂ ಆರೋಪಿಗಳು ನ್ಯೂಸ್ ಪೋರ್ಟಲ್‌ಗೆ ಹಣ ಪಡೆದ ಆರೋಪ ಹೊರಿಸಲಾಗಿತ್ತು.

ಹಣ ಪಡೆದು ಇಬ್ಬರೂ ತಮ್ಮ ಪೋರ್ಟಲ್ ನಲ್ಲಿ ಚೀನಾ ಪರ ಪ್ರಚಾರ ಮಾಡುತ್ತಿದ್ದರು ಎಂಬ ಗಂಭೀರ ಆರೋಪ ಹೊರಿಸಲಾಗಿತ್ತು. ಅಕ್ಟೋಬರ್ 3 ರಂದು ದೆಹಲಿ ಪೊಲೀಸರ ವಿಶೇಷ ಸೆಲ್ ಪುರ್ಕಾಯಸ್ಥ ಮತ್ತು ಚಕ್ರವರ್ತಿಯನ್ನು ಬಂಧಿಸಿತ್ತು.

ಇಂದಿಗ ಅವರ ಬಂಧನ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಹರ್ದೀಪ್ ಕೌರ್ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಈ ಆದೇಶವನ್ನು ನೀಡಿದ್ದಾರೆ. 

ಆರೋಪ ಏನು?
ಎಫ್‌ಐಆರ್‌ನ ಪ್ರಕಾರ, 'ಭಾರತದ ಸಾರ್ವಭೌಮತ್ವವನ್ನು ಅಡ್ಡಿಪಡಿಸಲು' ಮತ್ತು ದೇಶದ ವಿರುದ್ಧ ಅಸಮಾಧಾನವನ್ನು ಉಂಟುಮಾಡಲು ಚೀನಾದಿಂದ ನ್ಯೂಸ್ ಪೋರ್ಟಲ್‌ಗೆ ಹೆಚ್ಚಿನ ಪ್ರಮಾಣದ ಹಣ ಬಂದಿದೆ. 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹಾಳುಮಾಡಲು ಪುರ್ಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಗುಂಪಿನೊಂದಿಗೆ ಪಿತೂರಿ ನಡೆಸಿದ್ದಾರೆ ಎಂದು ಅದು ಆರೋಪಿಸಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಶಂಕಿತರು ಮತ್ತು ದತ್ತಾಂಶಗಳ ವಿಶ್ಲೇಷಣೆಯಲ್ಲಿ ಹೊರಹೊಮ್ಮಿದ ಶಂಕಿತರ ಮೇಲೆ ಅಕ್ಟೋಬರ್ 3 ರಂದು ದೆಹಲಿಯ 88 ಮತ್ತು ಇತರ ರಾಜ್ಯಗಳ ಏಳು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ನ್ಯೂಸ್‌ಕ್ಲಿಕ್‌ನ ಕಚೇರಿಗಳು ಮತ್ತು ಪತ್ರಕರ್ತರ ನಿವಾಸಗಳಿಂದ ಸುಮಾರು 300 ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ದಾಳಿಯ ನಂತರ, ಒಂಬತ್ತು ಮಹಿಳಾ ಪತ್ರಕರ್ತರು ಸೇರಿದಂತೆ 46 ವ್ಯಕ್ತಿಗಳನ್ನು ದೆಹಲಿ ಮತ್ತು ಎನ್‌ಸಿಆರ್‌ನಲ್ಲಿನ ವಿಶೇಷ ಕೋಶವು ಪ್ರಶ್ನಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT