ಸಾಂದರ್ಭಿಕ ಚಿತ್ರ 
ದೇಶ

ಕುಟುಂಬದಿಂದಲೇ ಬೆದರಿಕೆ; ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಆರೋಪ, ದೂರು ದಾಖಲು

ಉತ್ತರ ಪ್ರದೇಶದ 2017ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತನ್ನ ಸಂಬಂಧಿಕರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಅವರು ಸರ್ಕಾರ ಮತ್ತು ಎನ್‌ಜಿಒಗಳಿಂದ ಪಡೆದ ಹಣವನ್ನು ಕಿತ್ತುಕೊಂಡು ತನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಉನ್ನಾವೋ: ಉತ್ತರ ಪ್ರದೇಶದ 2017ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತನ್ನ ಸಂಬಂಧಿಕರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಅವರು ಸರ್ಕಾರ ಮತ್ತು ಎನ್‌ಜಿಒಗಳಿಂದ ಪಡೆದ ಹಣವನ್ನು ಕಿತ್ತುಕೊಂಡು ತನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

2019ರಲ್ಲಿ ಅಂದಿನ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಈ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಮಹಿಳೆ ದೂರಿನ ಮೇರೆಗೆ ಮಾಖಿ ಪೊಲೀಸ್ ಠಾಣೆಯಲ್ಲಿ ಆಕೆಯ ಚಿಕ್ಕಪ್ಪ, ತಾಯಿ, ಸಹೋದರಿ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 406 ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಎಎಸ್‌ಪಿ ಶಶಿ ಶೇಖರ್ ಸಿಂಗ್ ತಿಳಿಸಿದ್ದಾರೆ. 

ತನ್ನ ಕುಟುಂಬದವರಿಂದ ಬೆದರಿಕೆ ಎದುರಿಸುತ್ತಿರುವುದಾಗಿ ಇದೀಗ ವಿವಾಹಿತ ಮಹಿಳೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
'ನ್ಯಾಯಾಲಯದ ಆದೇಶದ ಮೇರೆಗೆ ಸರ್ಕಾರ ಮತ್ತು ಎನ್‌ಜಿಒಗಳು ನೀಡಿದ್ದ ಹಣವನ್ನು ನನ್ನ ಖರ್ಚಿಗೆ ಕೇಳಿದಾಗ, ನನ್ನ ಚಿಕ್ಕಪ್ಪ ಪ್ರಕರಣಕ್ಕೆ 7 ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ಬಂದಿರುವ ಹಣ ಸಾಕಾಗುವುದಿಲ್ಲ ಎಂದು ಹೇಳಿದರು' ಎಂದು ಅವರು ಆರೋಪಿಸಿದರು.

ಆಕೆಯ ಚಿಕ್ಕಪ್ಪ ಕೊಲೆ ಯತ್ನ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ 10 ವರ್ಷ ಶಿಕ್ಷೆ ಅನುಭವಿಸುತ್ತಿದ್ದಾರೆ. ಅವರ ಸೂಚನೆ ಮೇರೆಗೆ ನನ್ನ ತಾಯಿ ಮತ್ತು ಸಹೋದರಿ ನನ್ನ ಮತ್ತು ನನ್ನ ಗಂಡನ ಜೀವನಕ್ಕೆ ಶತ್ರುಗಳಾಗಿದ್ದಾರೆ. ಸರ್ಕಾರದಿಂದ ಪಡೆದ ಮನೆಯಿಂದ ತನ್ನನ್ನು ಮತ್ತು ತನ್ನ ಪತಿಯನ್ನು ಹೊರಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಶಿಕ್ಷೆಯಾಗುವಲ್ಲಿ ಸಂತ್ರಸ್ತೆಯ ಚಿಕ್ಕಪ್ಪ ಪ್ರಮುಖ ಪಾತ್ರ ವಹಿಸಿದ್ದರು.

ಇದೀಗ, ಸಂತ್ರಸ್ತೆ ಜೈಲಿನಲ್ಲಿರುವ ತನ್ನ ಚಿಕ್ಕಪ್ಪನ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತನ್ನ ಪತಿ ಮತ್ತು ತನಗೆ ಕುಟುಂಬ ಸದಸ್ಯರಿಂದ ಬೆದರಿಕೆ ಇದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT