ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ. 
ದೇಶ

'ನಾವು ಗೌತಮಿ ಪರ ಇದ್ದೇವೆ...ಆರೋಪಿಗಳ ರಕ್ಷಣೆಗೆ ಯಾರೂ ಯತ್ನಿಸುತ್ತಿಲ್ಲ: ಅಣ್ಣಾಮಲೈ

25 ವರ್ಷಗಳ ಬಳಿಕ ಪಕ್ಷ ತೊರೆದಿರುವ ನಟಿ ಗೌತಮಿ ತಡಿಮಲ್ಲ ಅವರ ಪರವಾಗಿ ನಾವಿದ್ದೇವೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿದ್ದಾರೆ.

ಚೆನ್ನೈ: 25 ವರ್ಷಗಳ ಬಳಿಕ ಪಕ್ಷ ತೊರೆದಿರುವ ನಟಿ ಗೌತಮಿ ತಡಿಮಲ್ಲ ಅವರ ಪರವಾಗಿ ನಾವಿದ್ದೇವೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅಣ್ಣಾಮಲೈ, 'ನಾವು ಗೌತಮಿ ತಡಿಮಲ್ಲ ಪರವಾಗಿದ್ದೇವೆ. ಅವರು ತಪ್ಪು ತಿಳುವಳಿಕೆಯನ್ನು ಹೊಂದಿದ್ದಾರೆ ಮತ್ತು ಪಕ್ಷವು ಅವರ ಪರವಾಗಿದೆ. ಗೌತಮಿ ಅವರಿಗೆ ಎಫ್‌ಐಆರ್ ದಾಖಲಿಸಲು ನಾವು ಬೆಂಬಲ ನೀಡಿದ್ದೆವು. ಆದರೆ ಈಗ ಕೆಲವು ಬಿಜೆಪಿ ಕಾರ್ಯಕರ್ತರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಭಾವಿಸಿದ್ದಾರೆ. ಆದರೆ ಬಿಜೆಪಿಯಲ್ಲಿ ಯಾರೂ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿಲ್ಲ ಮತ್ತು ಅವರು ಬಿಜೆಪಿಯೊಂದಿಗೆ ಸಂಪರ್ಕ ಹೊಂದಿಲ್ಲ. ಈ ಬಗ್ಗೆ ನಾನು ಗೌತಮಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಂತೆಯೇ ಪೊಲೀಸರು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಅವರು ಪಕ್ಷ ಬಿಟ್ಟಿರುವುದು ತುಂಬಾ ಬೇಸರದ ಸಂಗತಿ. ಬಿಜೆಪಿಯಲ್ಲಿ ಯಾರೂ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿಲ್ಲ. ಬಿಜೆಪಿ ಜೊತೆ ಅವರ ಸಂಪರ್ಕವಿಲ್ಲ. ಆರೋಪಿ ಗೌತಮಿ ಜೊತೆ 25 ವರ್ಷಗಳಿಂದ ಸ್ನೇಹಿತನಾಗಿ ಮೋಸ ಮಾಡಿದ್ದಾನೆ, ಗೌತಮಿ ಮತ್ತು ಆತನ ನಡುವೆ ಕೇಸ್ ಆಗಿದೆ, ನಾವು ಇಲ್ಲಿ ಗೌತಮಿ ಪರ ಇದ್ದೇವೆ ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT