ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್‌: 10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದ್ರಸಾ ಶಿಕ್ಷಕನ ಬಂಧನ

ಗುಜರಾತ್‌ನ ಜುನಾಗಢ್ ಜಿಲ್ಲೆಯ ಮದ್ರಸಾವೊಂದರಲ್ಲಿ ಕನಿಷ್ಠ 10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ(ಗುದ ಸಂಭೋಗ) ಎಸಗಿದ ಆರೋಪದ ಮೇಲೆ 25 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು...

ಜುನಾಗಢ್: ಗುಜರಾತ್‌ನ ಜುನಾಗಢ್ ಜಿಲ್ಲೆಯ ಮದ್ರಸಾವೊಂದರಲ್ಲಿ ಕನಿಷ್ಠ 10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ(ಗುದ ಸಂಭೋಗ) ಎಸಗಿದ ಆರೋಪದ ಮೇಲೆ 25 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
  
ಬಂಧಿತ ಶಿಕ್ಷಕನನ್ನು ಮೌಲಾನಾ ಎಂದು ಗುರುತಿಸಲಾಗಿದ್ದು, ಈ ಶಿಕ್ಷಕನ ವಿರುದ್ಧ ವಿದ್ಯಾರ್ಥಿಗಳು ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಆರೋಪದ ಮೇಲೆ ಮದ್ರಸಾದ 55 ವರ್ಷದ ಟ್ರಸ್ಟಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ ಎಂದು ಜುನಾಗಢ್ ಜಿಲ್ಲಾ ಪೊಲೀಸರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂರತ್‌ನಲ್ಲಿ ಶಿಕ್ಷಕನನ್ನು ಬಂಧಿಸಿದ ನಂತರ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಮದ್ರಸಾ ಟ್ರಸ್ಟಿಯನ್ನು ಭಾನುವಾರ ಜುನಾಗಢ್‌ದಲ್ಲಿ ಬಂಧಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

17 ವರ್ಷದ ಬಾಲಕ ನೀಡಿದ ದೂರಿನ ಆಧಾರದ ಮೇಲೆ ಮ್ಯಾಂಗ್ರೋಲ್ ಪೊಲೀಸರು ಈ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 377(ಅಸ್ವಾಭಾವಿಕ ಸಂಭೋಗ), 323(ಹಲ್ಲೆ), 506-2 (ಅಪರಾಧ ಬೆದರಿಕೆ) ಅಡಿಯಲ್ಲಿ ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ಕೇಸ್ ದಾಖಲಿಸಲಾಗಿದೆ.

ಮಂಗ್ರೋಲ್-ವೆರಾವಲ್ ಬೈಪಾಸ್‌ನಲ್ಲಿರುವ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಕೆಲ ದಿನಗಳ ಹಿಂದೆ ಮತ್ತೊಬ್ಬರ ಮೊಬೈಲ್‌ನಿಂದ ತನ್ನ ತಾಯಿಗೆ ಕರೆ ಮಾಡಿ ಶಿಕ್ಷಕನ ಲೈಂಗಿಕ ಹಾವಭಾವ ಮತ್ತು ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 21 ರಂದು ಪೊಲೀಸರು ವಸತಿ ಶಾಲೆಗೆ ಭೇಟಿ ನೀಡಿ, ಕೆಲವು ಮುಸ್ಲಿಂ ಮುಖಂಡರ ಸಹಾಯದಿಂದ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಚಾರಿಸಿದಾಗ, ಮದರಸಾದಲ್ಲಿ ಓದುತ್ತಿರುವ 10 ಹುಡುಗರು ಮುಂದೆ ಬಂದು ಆರೋಪಿ ಶಿಕ್ಷಕ ತಮ್ಮೊಂದಿಗೆ ಗುದ ಸಂಭೋಗ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಮತ್ತು ಈ ವಿಚಾರ ಪೋಷಕರಿಗೆ ಅಥವಾ ಹೊರಗಿನವರಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT