ಪ್ರಿಯಾಂಕ ವಾಧ್ರ 
ದೇಶ

ಪ್ರಧಾನಿ ಮೋದಿ ಬಗ್ಗೆ ಎನ್ವಲಪ್ ಹೇಳಿಕೆ: ಚುನಾವಣಾ ಆಯೋಗದಿಂದ ಪ್ರಿಯಾಂಕಾ ಗಾಂಧಿಗೆ ನೊಟೀಸ್

ಪ್ರಧಾನಿ ನರೇಂದ್ರ ಮೋದಿ ಅವರ ದೇವಾಲಯದ ಭೇಟಿಗೆ ಸಂಬಂಧಿಸಿದಂತೆ ಎನ್ವಲಪ್ ಹೇಳಿಕೆ ನೀಡಿದ್ದ ಪ್ರಿಯಾಂಕಾ ವಾಧ್ರಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೇವಾಲಯದ ಭೇಟಿಗೆ ಸಂಬಂಧಿಸಿದಂತೆ ಎನ್ವಲಪ್ ಹೇಳಿಕೆ ನೀಡಿದ್ದ ಪ್ರಿಯಾಂಕಾ ವಾಧ್ರಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. 

ಅ.30 ರೊಳಗೆ ನೊಟೀಸ್ ಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಪ್ರಿಯಾಂಕ ಗಾಂಧಿಗೆ ಸೂಚನೆ ನೀಡಿದೆ. 

ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ವೇಳೆ ಪ್ರಿಯಾಂಕಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಧಾರ್ಮಿಕ ಶ್ರದ್ಧೆಯನ್ನು ಉಲ್ಲೇಖಿಸಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಯೋಗಕ್ಕೆ ಬಿಜೆಪಿ ಮನವಿ ಮಾಡಿತ್ತು. ಈ ಬೆನ್ನಲ್ಲೇ ಪ್ರಿಯಾಂಕ ವಾಧ್ರಾಗೆ ನೊಟೀಸ್ ಜಾರಿ ಮಾಡಲಾಗಿದೆ. 

ಮೋದಿ ಅವರು ದೇವಸ್ಥಾನದಲ್ಲಿ ದೇಣಿಗೆಯ ಲಕೋಟೆಯನ್ನು ನೀಡಿದ್ದನ್ನು ಟಿವಿಯಲ್ಲಿ ನೋಡಿದಾಗ ಅದರಲ್ಲಿ ಕೇವಲ 21 ರೂಪಾಯಿ ಇದ್ದದ್ದು ಕಂಡುಬಂದಿತು ಎಂಬುದನ್ನು ಸುದ್ದಿಯಿಂದ ತಿಳಿದುಕೊಂಡೆ ಎಂದು ಹೇಳಿದ್ದರು. 

ಇದನ್ನೇ ಉಲ್ಲೇಖಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಿಯಾಂಕಾ ವಾಧ್ರ, ಸಾರ್ವಜನಿಕರಿಗೆ ಬಿಜೆಪಿ ಕೇವಲ ಲಕೋಟೆಯನ್ನು ತೋರಿಸುತ್ತದೆ. ಆದರೆ ಚುನಾವಣೆ ಬಳಿಕ ಅದರ ಒಳಗೆ ಏನೂ ಇರುವುದಿಲ್ಲ ಎಂದು ಹೇಳಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT