ವೈಭವ್ ಗೆಹ್ಲೋಟ್ 
ದೇಶ

ಫೆಮಾ ಪ್ರಕರಣ: ರಾಜಸ್ಥಾನ ಸಿಎಂ ಗೆಹ್ಲೋಟ್ ಪುತ್ರನಿಗೆ ಇಡಿ ಸಮನ್ಸ್

ವಿದೇಶಿ ವಿನಿಮಯ ಕಾನೂನು(ಫೆಮಾ) ಉಲ್ಲಂಘಿಸಿದ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ...

ಜೈಪುರ: ವಿದೇಶಿ ವಿನಿಮಯ ಕಾನೂನು(ಫೆಮಾ) ಉಲ್ಲಂಘಿಸಿದ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಶುಕ್ರವಾರ ಜೈಪುರ ಅಥವಾ ನವದೆಹಲಿಯಲ್ಲಿರುವ ಫೆಡರಲ್ ಏಜೆನ್ಸಿಯ ಕಚೇರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ವೈಭವ್ ಗೆಹ್ಲೋಟ್ ಅವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನ ಮೂಲದ ಹಾಸ್ಪಿಟಾಲಿಟಿ ಗ್ರೂಪ್ ಟ್ರಿಟಾನ್ ಹೋಟೆಲ್ಸ್ & ರೆಸಾರ್ಟ್ಸ್ ಪ್ರೈವೇಟ್ ಲಿಮಿಟೆಡ್, ವರ್ಧಾ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕ ಹಾಗೂ ಪ್ರವರ್ತಕರಾದ ಶಿವಶಂಕರ್ ಶರ್ಮಾ, ರತ್ತನ್ ಕಾಂತ್ ಶರ್ಮಾ ಮತ್ತು ಇತರರ ವಿರುದ್ಧದ ಇತ್ತೀಚಿನ ಇಡಿ ದಾಳಿಗೆ ಸಂಬಂಧಿಸಿದಂತೆ ಸಮನ್ಸ್‌ ನೀಡಲಾಗಿದೆ.

ಕಳೆದ ಆಗಸ್ಟ್‌ನಲ್ಲಿ ಜೈಪುರ, ಉದಯಪುರ, ಮುಂಬೈ ಮತ್ತು ದೆಹಲಿಯಲ್ಲಿ ದಾಳೆ ನಡೆಸಿದ್ದ ಇಡಿ ಅಧಿಕಾರಿಗಳು ಮೂರು ದಿನಗಳ ತೀವ್ರ ಶೋಧ ನಡೆಸಿದ್ದರು.

ರತ್ತನ್ ಕಾಂತ್ ಶರ್ಮಾ ಅವರು ವೈಭವ್ ಗೆಹ್ಲೋಟ್ ಅವರೊಂದಿಗಿನ ಸಂಪರ್ಕವನ್ನು ಇಡಿ ಪರಿಶೀಲಿಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ(ಫೆಮಾ) ಅಡಿಯಲ್ಲಿ ಅವರ ಹೇಳಿಕೆ ದಾಖಲಿಸಲು ವಿಚಾರಣೆಗೆ ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಜಯ್‌ಗೆ ಬೆಂಬಲ ನೀಡುವ ಆತಂಕ: 28 ಶಾಸಕರನ್ನು ಪುದುಚೇರಿ ರೆಸಾರ್ಟ್‌ಗೆ ಶಿಫ್ಟ್ ಮಾಡಿದ AIADMK

ಆಗಸದಲ್ಲಿ ದಾರಿ ತಪ್ಪಿದ ಮಹಾರಾಷ್ಟ್ರ ಡಿಸಿಎಂ Eknath Shinde ಹೆಲಿಕಾಪ್ಟರ್; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್, Video!

36 ಗಂಟೆಯಲ್ಲಿ 8 ಎನ್ಕೌಂಟರ್; 12 ಆರೋಪಿಗಳ ಹೆಡೆಮುರಿ ಕಟ್ಟಿದ ಉತ್ತರ ಪ್ರದೇಶ ಪೊಲೀಸರು!

ಬೆಂಗಳೂರಿನಲ್ಲೇ ಆಡ್ಬೇಕಿತ್ತು, ಆದ್ರೆ..: IPL 2026 ಫೈನಲ್ ಪಂದ್ಯದ ಮೈದಾನ ಬದಲಾವಣೆಗೆ ಇದೇ ಕಾರಣ ಎಂದ BCCI

ಭಯಭೀತರಾಗಿದ್ದ ಪ್ರಯಾಣಿಕರು: ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದೀನಿ ಚಪ್ಪಾಳೆ ತಟ್ಟಿ; ಪೈಲಟ್, ಮಾಜಿ ಕೇಂದ್ರ ಸಚಿವ ಪೈಲಟ್ ರೂಡಿ, Video!

SCROLL FOR NEXT