ಟ್ರಾಫಿಕ್ ಪೊಲೀಸ್ ಗೆ ಗುದ್ದಿದ ಎಸ್ ಯುವಿ 
ದೇಶ

ಭೀಕರ ವಿಡಿಯೋ: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಗೆ ಗುದ್ದಿದ ಎಸ್ ಯುವಿ, ಗಾಳಿಯಲ್ಲಿ ಹಾರಿ ಕೆಳಗೆಬಿದ್ದ ಸಿಬ್ಬಂದಿಗೆ ಗಾಯ

ಮತ್ತೊಂದು ಭೀಕರ ವಿಡಿಯೋ ವೈರಲ್ ಆಗುತ್ತಿದ್ದು, ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಎಸ್ ಯುವಿ ಕಾರು ಗುದ್ದಿದ ಪರಿಣಾಮ ಆತ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ. 

ನವದೆಹಲಿ: ಮತ್ತೊಂದು ಭೀಕರ ವಿಡಿಯೋ ವೈರಲ್ ಆಗುತ್ತಿದ್ದು, ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಎಸ್ ಯುವಿ ಕಾರು ಗುದ್ದಿದ ಪರಿಣಾಮ ಆತ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ. 

ಕಳೆದ ವಾರ ಈ ಘಟನೆ ನಡೆದಿದ್ದು, ಇದೀಗ ತಡವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ದೆಹಲಿಯ ಐಕಾನಿಕ್ ಕನ್ನಾಟ್ ಪ್ಲೇಸ್ ಮಾರುಕಟ್ಟೆಯಲ್ಲಿ ವಾಹನ ತಪಾಸಣೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರಿಗೆ ವೇಗವಾಗಿ ಬಂದ ಎಸ್‌ಯುವಿ ಕಾರು ಡಿಕ್ಕಿ ಹೊಡೆದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕನ್ನಾಟ್ ಪ್ಲೇಸ್ ಹೊರ ವೃತ್ತದಲ್ಲಿ ಈ ಘಟನೆ ನಡೆದಿದೆ. ಆ ಪ್ರದೇಶದಲ್ಲಿನ ಭದ್ರತಾ ಕ್ಯಾಮರಾದಿಂದ ಸೆರೆಹಿಡಿಯಲಾದ ವೀಡಿಯೊದಲ್ಲಿ ಕಾನ್ಸ್‌ಟೇಬಲ್ ಚೆಕ್‌ಪೋಸ್ಟ್‌ನಲ್ಲಿ ವಾಹನಗಳನ್ನು ಪರಿಶೀಲಿಸುತ್ತಿರುವಾಗ, ವೇಗವಾಗಿ ಬಂದ ಎಸ್‌ಯುವಿ ಅವರಿಗೆ ಡಿಕ್ಕಿ ಹೊಡೆದು ಬ್ಯಾರಿಕೇಡ್‌ಗಳ ಮೂಲಕ ಪರಾರಿಯಾಗಿದೆ. ಈ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜನನಿಬಿಡ ರಸ್ತೆಯಲ್ಲಿ ಬೀಳುವ ಮೊದಲು ಕಾನ್‌ಸ್ಟೇಬಲ್ ಗಾಳಿಯಲ್ಲಿ ಎಸೆಯಲ್ಪಟ್ಟಿದ್ದು, ಅವರ ಕಾಲು ಮತ್ತು ತಲೆಗೆ ಗಂಭೀರವಾಗಿ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಕಾನ್ಸ್‌ಟೇಬಲ್‌ಗೆ ಡಿಕ್ಕಿ ಹೊಡೆದ ನಂತರ ಎಸ್‌ಯುವಿ ಚೆಕ್‌ಪೋಸ್ಟ್‌ನಲ್ಲಿ ಮತ್ತೊಂದು ವಾಹನವನ್ನು ಡಿಕ್ಕಿ ಹೊಡೆದಿದೆ ಎಂದು ವೀಡಿಯೊ ತೋರಿಸುತ್ತದೆ. ಗಾಯಗೊಂಡಿರುವ ಕಾನ್‌ಸ್ಟೆಬಲ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರು ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಎಸ್‌ಯುವಿಯನ್ನು ಹಿಂಬಾಲಿಸಿದ್ದು, ಬಳಿಕ ಕಾರಿನ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. "ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದನು ಆದರೆ ನಾವು ಅವನನ್ನು ಹಿಡಿದಿದ್ದೇವೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT