ಪ್ರಧಾನಿ ಮೋದಿ 
ದೇಶ

ಅಯೋಧ್ಯೆ: ರಾಮಲಲ್ಲಾ ಪ್ರತಿಷ್ಠಾಪನೆ ನಂತರ, ಮಸೀದಿಗೂ ಪ್ರಧಾನಿಯಿಂದ ಶಂಕುಸ್ಥಾಪನೆಗೆ ಮುಸ್ಲಿಂ ಸಮುದಾಯದ ಬೇಡಿಕೆ

ಅಯೋಧ್ಯೆಯ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಅಯೋಧ್ಯೆಗೆ ಆಗಮಿಸಿದಾಗ, ಧನ್ನಿಪುರದಲ್ಲಿ ನಿರ್ಮಾಣವಾಗಲಿರುವ ಮಸೀದಿಗೂ ಶಂಕುಸ್ಥಾಪನೆಯನ್ನು ಅವರೇ ನೆರವೇರಿಸಬೇಕೆಂಬ ಬೇಡಿಕೆ ಬಂದಿದೆ. 

ಲಖನೌ: ಅಯೋಧ್ಯೆಯ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಅಯೋಧ್ಯೆಗೆ ಆಗಮಿಸಿದಾಗ, ಧನ್ನಿಪುರದಲ್ಲಿ ನಿರ್ಮಾಣವಾಗಲಿರುವ ಮಸೀದಿಗೂ ಶಂಕುಸ್ಥಾಪನೆಯನ್ನು ಅವರೇ ನೆರವೇರಿಸಬೇಕೆಂಬ ಬೇಡಿಕೆ ಬಂದಿದೆ. 

ಮುಸ್ಲಿಂ ಸಮುದಾಯ ಈ ಬೇಡಿಕೆ ಮುಂದಿಟ್ಟಿದೆ. ಧನ್ನಿಪುರ ಗ್ರಾಮದಲ್ಲಿ ಮಸೀದಿ ನಿರ್ಮಿಸಲು ಉದ್ದೇಶಿಸಲಾಗಿದೆ.
 
ಈ ಬೇಡಿಕೆ ಬಗ್ಗೆ ತಕ್ಷಣವೇ ಪ್ರತಿಕ್ರಿಯೆ ನೀಡಿರುವ, ಮಸೀದಿ ನಿರ್ಮಾಣದ ಹೊಣೆ ಹೊತ್ತಿರುವ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ (ಐಐಎಫ್ ಸಿ) ಮಸೀದಿಯ ನಕ್ಷೆ ಅನುಮೋದನೆಗೊಳ್ಳುವುದಕ್ಕೂ ಮುನ್ನ ಹಾಗೂ ಸಮರ್ಪಕ ನಿಧಿ ಸಂಗ್ರಹಕ್ಕೂ ಮುನ್ನವೇ ಪ್ರಧಾನಿ ಮೋದಿ ಅವರನ್ನು ಶಂಕುಸ್ಥಾಪನೆಗೆ ಆಹ್ವಾನಿಸುವ ಮೂಲಕ ಮಸೀದಿ ಯೋಜನೆಯನ್ನು ರಾಜಕೀಯಗೊಳಿಸುವುದು ಸೂಕ್ತವಲ್ಲ ಎಂದು ಹೇಳಿದೆ.

ನವೆಂಬರ್ 9, 2019 ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅಯೋಧ್ಯೆಯ ಸ್ಥಳೀಯ ಆಡಳಿತ ಮಸೀದಿ ನಿರ್ಮಾಣಕ್ಕಾಗಿ ಉತ್ತರ ಪ್ರದೇಶ ಸುನ್ನಿ ವಕ್ಫ್ ಮಂಡಳಿಗೆ ಅಯೋಧ್ಯೆಯಿಂದ 25 ಕಿ.ಮೀ ದೂರದಲ್ಲಿ ಧನ್ನಿಪುರ ಗ್ರಾಮದಲ್ಲಿ 5 ಎಕರೆಯಷ್ಟು ಭೂಮಿಯನ್ನು ಮಂಜೂರು ಮಾಡಿತ್ತು. 

ಮೋದಿ ಭಾರತದ ಪ್ರಧಾನಿ, ಅವರು ಹಿಂದೂ, ಮುಸ್ಲಿಮರಿಗೂ ಸಮವಾಗಿರಬೇಕು. ಅವರು ಹಿಂದೂ ಸಹೋದರರ ಮಂದಿರವನ್ನು ಉದ್ಘಾಟಿಸಲು ಆಗಮಿಸುವುದಾದರೆ, ಮಸೀದಿಗೂ ಅವರು ಶಂಕುಸ್ಥಾಪನೆ ನೆರವೇರಿಸಲಿ ಎಂದು ಜಮೈತ್ ಉಲಮಾ-ಎ-ಹಿಂದ್ ಅಯೋಧ್ಯೆ ವಿಭಾಗದ ಅಧ್ಯಕ್ಷ ಹಿಸ್ಬುಲ್ಲಾ ಬಾದ್ ಶಾ ಖಾನ್ ಒತ್ತಾಯಿಸಿದ್ದಾರೆ.

ಬಾಬ್ರಿ ಮಸೀದಿಯ ಮರು ನಿರ್ಮಾಣಕ್ಕೆ ಧ್ವನಿ ಎತ್ತಿದ್ದ ಭಾರತೀಯ ಮುಸ್ಲಿಂ ಲೀಗ್ ನ ರಾಜ್ಯಾಧ್ಯಕ್ಷ ನಜ್ಮುಲ್ ಹಸನ್ ಘನಿ, ಪ್ರಧಾನಿ ಮೋದಿ ಸುಪ್ರೀಂ ಕೋರ್ಟ್ ನ ಆದೇಶವನ್ನು ಗೌರವಿಸಿ ಮಸೀದಿಯ ಶಂಕುಸ್ಥಾಪನೆಯನ್ನೂ ನೆರವೇರಿಸಬೇಕು ಎಂದು ಹೇಳಿದ್ದಾರೆ. 

ಅಯೋಧ್ಯೆಯಲ್ಲಿ ಕೋಮು ಸೌಹಾರ್ದತೆಯ ಚಳುವಳಿಯ ಪಾಯಮ್-ಎ-ಇನ್ಸಾನಿಯತ್ ನ ಸಂಚಾಲಕ ಮೌಲಾನಾ ಅಸ್ಮಿ ನದ್ವಿ ಸಹ ಪ್ರಧಾನಿಗೆ ಮನವಿ ಮಾಡಿದ್ದು, ಪ್ರಸ್ತಾವಿತ ಮಸೀದಿ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ಖಂಡಿತವಾಗಿಯೂ ಸಕಾರಾತ್ಮಕ ಸಂದೇಶ ರವಾನೆ ಮಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಈ ಬೇಡಿಕೆಗಳ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಐಐಸಿಎಫ್ ಕಾರ್ಯದರ್ಶಿ ಅಖ್ತರ್ ಹುಸೇನ್, ಮಸೀದಿ ಪ್ರದೇಶಕ್ಕೆ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸುತ್ತೇವೆ. ಆದರೆ ಇದಕ್ಕೆ ರಾಜಕೀಯ ಬಣ್ಣ ನೀಡುವುದರಿಂದ ಜನರು ದೂರ ಉಳಿಯಬೇಕು, ಈ ಪ್ರಸ್ತಾವಿತ ಮಸೀದಿ ಹಿಂದೂ-ಮುಸ್ಲಿಂ ಒಗ್ಗಟ್ಟಿನ ಸಂಕೇತವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT