ಕೆಸಿ ವೇಣುಗೋಪಾಲ್ 
ದೇಶ

ವಿಪಕ್ಷ ನಾಯಕನೇ ಇಲ್ಲದ ಬಿಜೆಪಿ ಕಾಂಗ್ರೆಸ್ ಸರ್ಕಾರದ ಅಸ್ಥಿರತೆಗೆ ಯತ್ನಿಸುತ್ತಿರುವುದು ಹಾಸ್ಯಾಸ್ಪದ: ಕೆಸಿ ವೇಣುಗೋಪಾಲ್

ಬಿಜೆಪಿ ನಾಯಕರ ತಂಡವೊಂದು ಶಾಸಕರಿಗೆ ಪಕ್ಷಾಂತರ ಮಾಡುವ ಆಫರ್‌ಗಳೊಂದಿಗೆ ಸಂಪರ್ಕಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ಗಾಣಿಗ) ಹೇಳಿಕೆ ನೀಡಿರುವ ಮಾಧ್ಯಮ ವರದಿಯನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಕರ್ನಾಟಕದ ಬಿಜೆಪಿಯು ದಕ್ಷಿಣದ ರಾಜ್ಯದಲ್ಲಿನ ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

ಬಿಜೆಪಿ ನಾಯಕರ ತಂಡವೊಂದು ಶಾಸಕರಿಗೆ ಪಕ್ಷಾಂತರ ಮಾಡುವ ಆಫರ್‌ಗಳೊಂದಿಗೆ ಸಂಪರ್ಕಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ಗಣಿಗ) ಹೇಳಿಕೆ ನೀಡಿರುವ ಮಾಧ್ಯಮ ವರದಿಯನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ವಿಪಕ್ಷ ನಾಯಕ ಅಥವಾ ಅಜೆಂಡಾ ಇಲ್ಲದ ಪಕ್ಷವು (ಬಿಜೆಪಿ) ಜನಾದೇಶವನ್ನು ರದ್ದುಗೊಳಿಸುವ ಹಳೆಯ ಅಭ್ಯಾಸವನ್ನು ಈಗ ಆಶ್ರಯಿಸುತ್ತಿದೆ. ದೆಹಲಿಯಲ್ಲಿರುವ ತಮ್ಮ ನಾಯಕರ ನಿರ್ದೇಶನದ ಮೇರೆಗೆ ಕರ್ನಾಟಕ ಬಿಜೆಪಿಯು ನಮ್ಮ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಮತ್ತೊಂದು ನಗೆಪಾಟಲಿನ ಪ್ರಯತ್ನ ಮಾಡುತ್ತಿದೆ' ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.

'ಆದರೆ, ನಮ್ಮ ಕಾಂಗ್ರೆಸ್ ಶಾಸಕರು ನಿಷ್ಠಾವಂತರಾಗಿದ್ದು, ಈ ಸರ್ಕಾರ ಜಾರಿಗೆ ತಂದಿರುವ ಖಾತರಿ ಯೋಜನೆಗಳ ಅನುಷ್ಠಾನವು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಬಹುಶಃ ಅವರು ಮೊದಲು ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ಅಧ್ಯಕ್ಷರನ್ನು ಹುಡುಕಬೇಕು ಅಲ್ಲವೇ?' ಎಂದು ಟೀಕಿಸಿದ್ದಾರೆ.

2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನದ ಹಿಂದೆ ಇದ್ದ ತಂಡ ಇದೀಗ 50 ಕೋಟಿ ರೂ. ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಕೆಲಸ ಮಾಡುತ್ತಿದೆ ಮತ್ತು ಈಗಾಗಲೇ ನಾಲ್ವರು ಶಾಸಕರನ್ನು ಸಂಪರ್ಕಿಸಲಾಗಿದೆ ಎಂದು ಗಣಿಗ ರವಿ ಶುಕ್ರವಾರ ಆರೋಪಿಸಿದ್ದಾರೆ.

ನಮ್ಮ ಪಕ್ಷದ ಪ್ರಾಮಾಣಿಕ ಶಾಸಕರು ಈ ಮಾಹಿತಿಯನ್ನು ಪಕ್ಷದೊಂದಿಗೆ ಹಂಚಿಕೊಂಡಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವುದಕ್ಕೆ ಹಿರಿಯ ಶಾಸಕರು ಹಾಗೂ ಹೊಸ ಶಾಸಕರನ್ನೂ ಸಂಪರ್ಕಿಸಲಾಗಿದೆ. ಆದರೆ, ಯಾವೊಬ್ಬ ಶಾಸಕರೂ ಅವರ ಆಮಿಷಕ್ಕೆ ಬಲಿಯಾಗಿಲ್ಲ. ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಈ ಸಂಬಂಧ ಇರುವ ವಿಡಿಯೋ ಹಾಗೂ ದಾಖಲೆಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದು ಶಾಸಕರು ಹೇಳಿದ್ದಾರೆ.

ಕಳೆದ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದು, ಬಿಜೆಪಿಯನ್ನು ಕೆಳಗಿಳಿಸಿತ್ತು. ಮೇ 20ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT