ಆಂಧ್ರದಲ್ಲಿ ಸಂಭವಿಸಿದ ರೈಲು ಅಪಘಾತ 
ದೇಶ

ಆಂಧ್ರದಲ್ಲಿ ರೈಲು ಅಪಘಾತಕ್ಕೆ ಮಾನವ ಲೋಪ ಕಾರಣ ಸಾಧ್ಯತೆ: ಪೂರ್ವ ಕರಾವಳಿ ರೈಲ್ವೆ

ಆಂಧ್ರಪ್ರದೇಶದ ವಿಜಿಯನಗರಂ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತಕ್ಕೆ ಮಾನವ ಲೋಪವೇ ಕಾರಣವಾಗಿರಬಹುದು ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಹೇಳಿದೆ.

ಭುವನೇಶ್ವರ್: ಆಂಧ್ರಪ್ರದೇಶದ ವಿಜಿಯನಗರಂ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತಕ್ಕೆ ಮಾನವ ಲೋಪವೇ ಕಾರಣವಾಗಿರಬಹುದು ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಹೇಳಿದೆ.
 
ರೈಲು ಅಪಘಾತದಲ್ಲಿ 3 ಬೋಗಿಗಳು ಹಳಿ ತಪ್ಪಿದ ಪರಿಣಾಮ 8 ಮಂದಿ ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಶಾಖಪಟ್ಟಣಂ- ರಾಯಗಢ ಪ್ಯಾಸೆಂಜರ್ ರೈಲು ಮಾನವ ದೋಷದಿಂದಾಗಿ ಸಿಗ್ನಲ್ ಮೀರಿದ್ದು, ಇದೇ ಅಪಘಾತಕ್ಕೆ ಕಾರಣವಿರಬಹುದು ಎಂದು ಇಸಿಓಆರ್ ಸಿಪಿಆರ್ ಒ ಬಿಸ್ವಜೀತ್ ಸಾಹೂ ವರದಿಗಾರರಿಗೆ ಹೇಳಿದ್ದಾರೆ.

ನಿಲುಗಡೆಗೆ ಸಿಗ್ನಲ್ ತೋರುತ್ತಿದ್ದರೂ ಅದನ್ನು ಗಮನಿಸದೇ ರೈಲು ಚಲಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಇದನ್ನೇ ಸಿಗ್ನಲ್ ಓವರ್ ಶೂಟಿಂಗ್  ಎನ್ನುತ್ತಾರೆ ಎಂದು ಸಾಹು ತಿಳಿಸಿದ್ದಾರೆ. 

ಅಪಘಾತದ ಪರಿಣಾಮವಾಗಿ ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿನ ಹಿಂಭಾಗದಿಂದ ಎರಡು ಕೋಚ್‌ಗಳು ಮತ್ತು ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್‌ನ ಲೊಕೊ ಹಳಿತಪ್ಪಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ