ಆಂಧ್ರದಲ್ಲಿ ಸಂಭವಿಸಿದ ರೈಲು ಅಪಘಾತ 
ದೇಶ

ಆಂಧ್ರದಲ್ಲಿ ರೈಲು ಅಪಘಾತಕ್ಕೆ ಮಾನವ ಲೋಪ ಕಾರಣ ಸಾಧ್ಯತೆ: ಪೂರ್ವ ಕರಾವಳಿ ರೈಲ್ವೆ

ಆಂಧ್ರಪ್ರದೇಶದ ವಿಜಿಯನಗರಂ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತಕ್ಕೆ ಮಾನವ ಲೋಪವೇ ಕಾರಣವಾಗಿರಬಹುದು ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಹೇಳಿದೆ.

ಭುವನೇಶ್ವರ್: ಆಂಧ್ರಪ್ರದೇಶದ ವಿಜಿಯನಗರಂ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತಕ್ಕೆ ಮಾನವ ಲೋಪವೇ ಕಾರಣವಾಗಿರಬಹುದು ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಹೇಳಿದೆ.
 
ರೈಲು ಅಪಘಾತದಲ್ಲಿ 3 ಬೋಗಿಗಳು ಹಳಿ ತಪ್ಪಿದ ಪರಿಣಾಮ 8 ಮಂದಿ ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಶಾಖಪಟ್ಟಣಂ- ರಾಯಗಢ ಪ್ಯಾಸೆಂಜರ್ ರೈಲು ಮಾನವ ದೋಷದಿಂದಾಗಿ ಸಿಗ್ನಲ್ ಮೀರಿದ್ದು, ಇದೇ ಅಪಘಾತಕ್ಕೆ ಕಾರಣವಿರಬಹುದು ಎಂದು ಇಸಿಓಆರ್ ಸಿಪಿಆರ್ ಒ ಬಿಸ್ವಜೀತ್ ಸಾಹೂ ವರದಿಗಾರರಿಗೆ ಹೇಳಿದ್ದಾರೆ.

ನಿಲುಗಡೆಗೆ ಸಿಗ್ನಲ್ ತೋರುತ್ತಿದ್ದರೂ ಅದನ್ನು ಗಮನಿಸದೇ ರೈಲು ಚಲಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಇದನ್ನೇ ಸಿಗ್ನಲ್ ಓವರ್ ಶೂಟಿಂಗ್  ಎನ್ನುತ್ತಾರೆ ಎಂದು ಸಾಹು ತಿಳಿಸಿದ್ದಾರೆ. 

ಅಪಘಾತದ ಪರಿಣಾಮವಾಗಿ ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿನ ಹಿಂಭಾಗದಿಂದ ಎರಡು ಕೋಚ್‌ಗಳು ಮತ್ತು ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್‌ನ ಲೊಕೊ ಹಳಿತಪ್ಪಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT