ಸಾಂದರ್ಭಿಕ ಚಿತ್ರ 
ದೇಶ

ಲಂಕಾ ನೌಕಾಪಡೆಯಿಂದ ತಮಿಳುನಾಡಿನ 37 ಮೀನುಗಾರರ ಬಂಧನ; ಶಾಶ್ವತ ಪರಿಹಾರ ಕೋರಿ ಕೇಂದ್ರಕ್ಕೆ ಸ್ಟಾಲಿನ್ ಪತ್ರ

ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಚೆನ್ನೈ: ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಲಂಕಾ ನೌಕಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 35 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ.

ಈ ತಿಂಗಳೊಂದರಲ್ಲೇ ರಾಜ್ಯದ 10 ಮೀನುಗಾರಿಕಾ ದೋಣಿಗಳನ್ನು ಮತ್ತು 64 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು, ಎಲ್ಲಾ ಮೀನುಗಾರರು ಮತ್ತು ಅವರ ಮೀನುಗಾರಿಕಾ ದೋಣಿಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್ ಅವರು, ಅಕ್ಟೋಬರ್ 28 ರಂದು ಶ್ರೀಲಂಕಾ ನೌಕಾಪಡೆಯಿಂದ 37 ಮೀನುಗಾರರು ಮತ್ತು ಅವರ ಐದು ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿಮಗೆ ತಿಳಿದಿರುವಂತೆ, ನಮ್ಮ ಮೀನುಗಾರರು ಜೀವನೋಪಾಯಕ್ಕಾಗಿ ಮೀನುಗಾರಿಕೆ ಚಟುವಟಿಕೆಯನ್ನು ಮಾತ್ರ ಅವಲಂಬಿಸಿದ್ದಾರೆ. ಇದರಿಂದ ಅವರು ಆಗಾಗ್ಗೆ ಬಂಧನಕ್ಕೊಳಗಾಗುತ್ತಿದ್ದು, ಇದು ಅವರ ಸಮುದಾಯಕ್ಕೆ ಅಪಾರವಾದ ಸಂಕಟ ಮತ್ತು ನೋವನ್ನು ಉಂಟುಮಾಡುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT