ಛತ್ತೀಸ್ ಗಢ ಸಿಎಂ ಬಘೇಲ್ 
ದೇಶ

ನೋಟಾ ಆಯ್ಕೆ ರದ್ದುಗೊಳಿಸಬೇಕು: ಛತ್ತೀಸ್‌ಗಢ ಸಿಎಂ ಬಘೇಲ್

ಯಾವುದೇ ಅಭ್ಯರ್ಥಿಗೆ ಮತ ಚಲಾಯಿಸಲು ಒಲವು ತೋರದ ನಾಗರಿಕರಿಗೆ ವಿದ್ಯುನ್ಮಾನ ಮತಯಂತ್ರಗಳಲ್ಲಿನ ನೋಟಾ ಆಯ್ಕೆಯನ್ನು ರದ್ದುಗೊಳಿಸಬೇಕು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್  ಹೇಳಿದ್ದಾರೆ.

ರಾಯಪುರ: ಯಾವುದೇ ಅಭ್ಯರ್ಥಿಗೆ ಮತ ಚಲಾಯಿಸಲು ಒಲವು ತೋರದ ನಾಗರಿಕರಿಗೆ ವಿದ್ಯುನ್ಮಾನ ಮತಯಂತ್ರಗಳಲ್ಲಿನ ನೋಟಾ ಆಯ್ಕೆಯನ್ನು ರದ್ದುಗೊಳಿಸಬೇಕು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್  ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ನಂತರ 2013 ರಲ್ಲಿ ಚುನಾವಣಾ ಆಯೋಗ ಇವಿಎಂನ ಕೊನೆಯಲ್ಲಿ ನೋಟಾ ಬಟನ್ ಸೇರಿಸಿತು. ನೋಟಾ ತನ್ನದೇ ಆದ ಚಿಹ್ನೆಯ ಮೇಲೆ ಕಪ್ಪು ಶಿಲುಬೆಯೊಂದಿಗೆ ಬ್ಯಾಲೆಟ್ ಪೇಪರ್ ಹೊಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಘೇಲ್, ಕೆಲವೊಮ್ಮೆ ನೋಟಾ ಗೆಲುವು ಮತ್ತು ಸೋಲಿನ ಅಂತರಕ್ಕಿಂತ ಹೆಚ್ಚಿನ ಮತಗಳನ್ನು ಪಡೆದಿರುವುದು ಕಂಡುಬಂದಿದೆ ಎಂದರು. 
        
2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಮತದಾರರು ನೋಟಾ ಒಲವು ತೋರಿದ್ದು, ಆಯ್ಕೆಯು ಚುನಾವಣೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಚುನಾವಣಾ ಆಯೋಗ ಅದನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಇಬ್ಬರು ಅಭ್ಯರ್ಥಿಗಳ ನಡುವೆ ಗೆಲುವು ಮತ್ತು ಸೋಲಿನ ಅಂತರಕ್ಕಿಂತ ನೋಟದಲ್ಲಿ ಹೆಚ್ಚಿನ ಮತ ನೀಡಿರುವುದು ಹಲವು ಬಾರಿ ಕಂಡುಬಂದಿದೆ. ಆದ್ದರಿಂದ ನೋಟಾ ಆಯ್ಕೆಯನ್ನು ರದ್ದುಗೊಳಿಸಬೇಕು  ಎಂದು ಬಘೆಲ್ ಹೇಳಿದರು. 
        
90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT