ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರ ರಾಜಧಾನಿಯಲ್ಲಿ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ದ ಪೀಠವು, ಪ್ರಕರಣವನ್ನು ಉನ್ನತ ನ್ಯಾಯಾಲಯವು ವಿಶ್ಲೇಷಿಸಿದ ನಂತರ ಕೆಲವು ಅಂಶಗಳು ಅನುಮಾನಾಸ್ಪದವಾಗಿರುವುದು ಕಂಡುಬಂದಿದೆ ಎಂದು ಹೇಳಿದೆ.

'ಈ ವಿಶ್ಲೇಷಣೆಯಲ್ಲಿ, 338 ಕೋಟಿ ರೂ. ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವು ಅನುಮಾನಾಸ್ಪದ ಅಂಶಗಳು ಕಂಡುಬಂದಿವೆ. ಹೀಗಾಗಿ, ನಾವು ಜಾಮೀನು ತಿರಸ್ಕರಿಸಿದ್ದೇವೆ' ಎಂದು ಪೀಠ ಹೇಳಿತು.

ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಏಳು ತಿಂಗಳಿನಿಂದ ಜೈಲಿನಲ್ಲಿರುವ ಸಿಸೋಡಿಯಾ ಅವರನ್ನು ಫೆಬ್ರುವರಿ 26 ರಂದು ಸಿಬಿಐ ಬಂಧಿಸಿತು ಮತ್ತು ನಂತರ ಮಾರ್ಚ್ 9ರಂದು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿತು. 

ಈ ಹಿಂದೆ ದೆಹಲಿ ಹೈಕೋರ್ಟ್ ಕೂಡ ಎಎಪಿ ನಾಯಕನಿಗೆ ಜಾಮೀನು ನಿರಾಕರಿಸಿತ್ತು.

ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು 56 ಪುಟಗಳ ಆದೇಶದಲ್ಲಿ 'ಆರೋಪಿ ಹೊಂದಿರುವ ಉನ್ನತ ರಾಜಕೀಯ ಸ್ಥಾನಮಾನ ಮತ್ತು ದೆಹಲಿಯಲ್ಲಿ ಅಧಿಕಾರದಲ್ಲಿರುವ ಪಕ್ಷದಲ್ಲಿನ ಅವರ ಸ್ಥಾನದಿಂದಾಗಿ 'ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ' ಎಂದಿದ್ದರು. ಏಪ್ರಿಲ್ 28ರಂದು ಅವರಿಗೆ ಜಾಮೀನು ನಿರಾಕರಿಸಿದ ಹಿಂದಿನ ವಿಶೇಷ ನ್ಯಾಯಾಲದ ತೀರ್ಪನ್ನು ಎತ್ತಿಹಿಡಿದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!