ಮನ್ಸುಖ್ ಮಾಂಡವಿಯಾ 
ದೇಶ

ಕೊರೋನಾ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ ಪಾರಾಗಲು ಕಠಿಣ ವ್ಯಾಯಾಮ, ಕೆಲಸ ಮಾಡಬೇಡಿ: ಸಚಿವ ಮನ್ಸುಖ್ ಮಾಂಡವಿಯಾ

ಭಾರತದಲ್ಲಿ ವೇಗವಾಗಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿವೆಯೇ? ಎಂಬ ಪ್ರಶ್ನೆ ಇಂದು ಎಲ್ಲರ ಮನದಲ್ಲಿ ಮೂಡುತ್ತಿದೆ. ಹೌದು, ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ...

ನವದೆಹಲಿ: ಭಾರತದಲ್ಲಿ ವೇಗವಾಗಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿವೆಯೇ? ಎಂಬ ಪ್ರಶ್ನೆ ಇಂದು ಎಲ್ಲರ ಮನದಲ್ಲಿ ಮೂಡುತ್ತಿದೆ. ಹೌದು, ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಹೃದಯಾಘಾತಕ್ಕೆ ನಿಜವಾದ ಕಾರಣ ಮತ್ತು ಅದನ್ನು ತಡೆಗಟ್ಟುವ ಮಾರ್ಗಗಳನ್ನು ಹೇಳಿದ್ದಾರೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ಅಧ್ಯಯನವನ್ನು ಮಾಂಡವಿಯಾ ಉಲ್ಲೇಖಿಸಿದ್ದಾರೆ. ಈ ಹಿಂದೆ ತೀವ್ರವಾದ ಕೋವಿಡ್ -19 ಕಾಯಿಲೆಯಿಂದ ಬಳಲುತ್ತಿದ್ದ ಜನರನ್ನು ಒಂದು ಅಥವಾ ಎರಡು ವರ್ಷಗಳ ಕಾಲ ಹೃದಯಾಘಾತದಿಂದ ಪಾರಾಗಬೇಕಾದರೆ ಹೆಚ್ಚು ಕಷ್ಟಪಟ್ಟು ಕೆಲಸ ಮಾಡುವುದನ್ನು ತಪ್ಪಿಸಬೇಕು. ಕಠಿಣ ವ್ಯಾಯಾಮ ಮಾಡಬಾರದು ಎಂದು ಹೇಳಿದರು.

ಗುಜರಾತ್‌ನಲ್ಲಿ ಇತ್ತೀಚೆಗೆ ನವರಾತ್ರಿ ಉತ್ಸವದ 'ಗರ್ಬಾ' ಕಾರ್ಯಕ್ರಮಗಳು ಸೇರಿದಂತೆ ಹೃದಯ ಸಂಬಂಧಿ ಸಮಸ್ಯೆಗಳಿಂದಾಗಿ ಹಲವು ಸಾವುಗಳು ಸಂಭವಿಸಿತ್ತು. ಇದು ಗುಜರಾತ್ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಹೃದ್ರೋಗ ತಜ್ಞರು ಸೇರಿದಂತೆ ವೈದ್ಯಕೀಯ ತಜ್ಞರೊಂದಿಗೆ ಸಭೆ ನಡೆಸಲು ಪ್ರೇರೇಪಿಸಿದರು.

ಹೃದಯಾಘಾತದ ಕಾರಣಗಳು ಮತ್ತು ಅದನ್ನು ತಡೆಗಟ್ಟುವ ಕ್ರಮಗಳನ್ನು ಕಂಡುಹಿಡಿಯಲು ಸಾವಿನ ಡೇಟಾವನ್ನು ಸಂಗ್ರಹಿಸಲು ಪಟೇಲ್ ತಜ್ಞರನ್ನು ಕೇಳಿದ್ದರು.

ಇನ್ನು ಮಾಂಡವಿಯಾ ಸುದ್ದಿಗಾರರೊಂದಿಗೆ ಮಾತನಾಡುತ್ತಾ, 'ಐಸಿಎಂಆರ್ ವಿವರವಾದ ಅಧ್ಯಯನವನ್ನು ಮಾಡಿದೆ. ಈ ಅಧ್ಯಯನದ ಪ್ರಕಾರ, ತೀವ್ರ ಕೋವಿಡ್ -19 ಸೋಂಕಿನಿಂದ ಬಳಲುತ್ತಿರುವ ಜನರು ಶ್ರಮದಾಯಕ ಕೆಲಸವನ್ನು ಮಾಡಬಾರದು. ಅವರು ಸ್ವಲ್ಪ ಸಮಯದವರೆಗೆ ವಿಶ್ರಾಂತಿ ಪಡೆಯಬೇಕು. ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ವ್ಯಾಯಾಮ, ಓಟ ಮತ್ತು ಭಾರೀ ವ್ಯಾಯಾಮದಿಂದ ದೂರವಿರಿ, ಇದರಿಂದ ಹೃದಯಾಘಾತವನ್ನು ತಪ್ಪಿಸಬಹುದು ಎಂದು ಸಲಹೆ ನೀಡಿದ್ದಾರೆ.

ಗುಜರಾತ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರಲ್ಲಿ ಖೇಡಾ ಜಿಲ್ಲೆಯ 12ನೇ ತರಗತಿ ವಿದ್ಯಾರ್ಥಿ ವೀರ್ ಶಾ, ಅಹಮದಾಬಾದ್‌ನ ರವಿ ಪಾಂಚಾಲ್ (28) ಮತ್ತು ವಡೋದರದ ಶಂಕರ್ ರಾಣಾ (55) ಸೇರಿದ್ದಾರೆ.

ನವರಾತ್ರಿ ಉತ್ಸವಗಳು ಪ್ರಾರಂಭವಾಗುವ ಮೊದಲು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಧಿಸೂಚನೆಯ ಮೂಲಕ, ಭಾಗವಹಿಸುವವರಿಗೆ ತಕ್ಷಣದ ನೆರವು ನೀಡಲು ಗರ್ಬಾ ಕಾರ್ಯಕ್ರಮದ ಆಯೋಜಕರು ಸ್ಥಳದಲ್ಲಿ ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ತಂಡವನ್ನು ನಿಯೋಜಿಸುವುದನ್ನು ಕಡ್ಡಾಯಗೊಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT