ದೇಶ

ಜಮ್ಮು ಮತ್ತು ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, ಓರ್ವ ಉಗ್ರನ ಸದೆಬಡಿದ ಸೇನಾಪಡೆ

Manjula VN

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ಬಳಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಮಾತ್ರವಲ್ಲದೇ ಈ ಕಾರ್ಯಾಚರಣೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸಿದ ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದು, ನಿನ್ನೆ ಆರಂಭವಾದ ಜಂಟಿ ಕಾರ್ಯಾಚರಣೆಯಲ್ಲಿ, ಕೆರಾನ್ ಸೆಕ್ಟರ್‌ನ ಜುಮಗುಂಡ್ ಪ್ರದೇಶದಲ್ಲಿ ಸೇನೆ ಮತ್ತು ಕುಪ್ವಾರ ಪೊಲೀಸರು ಒಳನುಸುಳುವಿಕೆ ಯತ್ನವನ್ನು ಯಶಸ್ವಿಯಾಗಿ ವಿಫಲಗೊಳಿಸಿದ್ದಾರೆ, ಇದರಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

SCROLL FOR NEXT