ಎನ್‌ಸಿಪಿ ಶಾಸಕನ ಮನೆಗೆ ಬೆಂಕಿ 
ದೇಶ

ಮರಾಠ ಮೀಸಲಾತಿ ಹೋರಾಟ: ಎನ್‌ಸಿಪಿ ಶಾಸಕನ ಮನೆಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರದಲ್ಲಿ ಮರಾಠಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಶಾಸಕ ಪ್ರಕಾಶ್ ಸೋಲಂಕೆ ಅವರಿಗೆ ಸೇರಿದ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಮರಾಠಿ ಮೀಸಲಾತಿ ಹೋರಾಟ (Maratha reservation protest) ತಾರಕಕ್ಕೇರಿದ್ದು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(NCP) ಶಾಸಕ ಪ್ರಕಾಶ್ ಸೋಲಂಕೆ ಅವರಿಗೆ ಸೇರಿದ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು (Maharashtra Police) ತಿಳಿಸಿದ್ದಾರೆ.

ಹೌದು.. ಮರಾಠಿ ಮೀಸಲಾತಿಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಮರಾಠ ಮೀಸಲಾತಿ ಹೋರಾಟ ಮತ್ತು ಹೋರಾಟಗಾರ ಮನೋಜ್ ಜರಂಗೆ ಅವರ ಉಪವಾಸ ಸತ್ಯಾಗ್ರಹ (hunger strike)ದ ಕುರಿತಂತೆ ಸೋಲಂಕೆ ನೀಡಿದ್ದಾರೆಂಬ ಅವಹೇಳನಕಾರಿ ಹೇಳಿಕೆ ಕುರಿತಾದ ಆಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಆ ಬಳಿಕ ಪ್ರತಿಭಟನೆ ಭುಗಿಲೆದ್ದಿದೆ. ಮಜಲ್‌ಗಾಂವ್‌ನ ಸೋಲಂಕೆ ನಿವಾಸದ ಬಳಿ ನಿಂತಿದ್ದ ಕಾರಿಗೂ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂದರ್ಭ ಶಾಸಕರು ಮನೆಯಲ್ಲಿದ್ದರೇ ಎಂಬುದು ಸ್ಪಷ್ಟವಾಗಿಲ್ಲ. ಪ್ರಕಾಶ್ ಸೋಲಂಕೆ ಅವರದ್ದೆನ್ನಲಾದ ಆಡಿಯೊ ಹರಿದಾಡುತ್ತಿದ್ದಂತೆ ಪ್ರತಿಭಟನೆ ಭುಗಿಲೆದ್ದಿದೆ. ಸ್ಥಳೀಯವಾಗಿ ಬಂದ್‌ಗೆ ಕರೆ ನೀಡಲಾಗಿದೆ. ಶಾಸಕರ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮರಾಠ ಮೀಸಲಾತಿ ವಿಚಾರವು ಮಕ್ಕಳಾಟದಂತಾಗಿದೆ ಎಂದು ಶಾಸಕರು ಹೇಳಿದ್ದಾರೆ ಎನ್ನಲಾದ ಆಡಿಯೊ ಹರಿದಾಡುತ್ತಿದೆ. ಅಲ್ಲದೆ, ಮನೋಜ್ ಜರಂಗೆ ಅವರನ್ನು ಉದ್ದೇಶಿಸಿ, ಗ್ರಾಮ ಪಂಚಾಯಿತಿಯಲ್ಲೂ ಸ್ಪರ್ಧೆ ಮಾಡದವನು ಈಗ ಬುದ್ಧಿವಂತ ಮನುಷ್ಯನಾಗಿದ್ದಾನೆ ಎಂದೂ ಶಾಸಕರು ಹೇಳಿದ್ದಾರೆ ಎನ್ನಲಾಗಿದೆ. ಇತರೆ ಹಿಂದುಳಿದ ವರ್ಗ (ಒಬಿಸಿ)ಗಳ(OBC) ಅಡಿಯಲ್ಲಿ ಮರಾಠರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗೆ ಒತ್ತಾಯಿಸಿ ಮರಾಠ ಸಮುದಾಯ (Maratha Community)ವು ಪ್ರತಿಭಟನೆ ನಡೆಸುತ್ತಿದೆ.

ಅಕ್ಟೋಬರ್ 25ರಿಂದ ಎರಡನೇ ಹಂತದ ಪ್ರತಿಭಟನೆಯ ಭಾಗವಾಗಿ ಜಲ್ನಾ ಜಿಲ್ಲೆಯ ಅಂತರ್ವಾಲಿ ಸಾರಥಿ ಹಳ್ಳಿಯಲ್ಲಿ ಜರಂಗೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಬಳಿಕ ಪ್ರತಿಭಟನೆ ತೀವ್ರತೆ ಪಡೆಯಿತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT