ಮಮತಾ ಬ್ಯಾನರ್ಜಿ, ಅಶ್ವಿನಿ ವೈಷ್ಣವ್ 
ದೇಶ

ರೈಲ್ವೆ ಇಲಾಖೆ ನಿದ್ರೆಯಿಂದ ಹೊರಬರುವುದು ಯಾವಾಗ? ಆಂಧ್ರ ರೈಲು ಅಪಘಾತದ ಬಗ್ಗೆ ಮಮತಾ ಬ್ಯಾನರ್ಜಿ ಕಿಡಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಆಂಧ್ರ ರೈಲು ದುರಂತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರೈಲ್ವೆ ನಿದ್ರೆಯಿಂದ ಯಾವಾಗ ಹೊರಬರುತ್ತವೆ? ಎಂದು ಪ್ರಶ್ನಿಸಿದ್ದಾರೆ. 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಆಂಧ್ರ ರೈಲು ದುರಂತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರೈಲ್ವೆ ನಿದ್ರೆಯಿಂದ ಯಾವಾಗ ಹೊರಬರುತ್ತವೆ? ಎಂದು ಪ್ರಶ್ನಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಮತ್ತೊಂದು ವಿನಾಶಕಾರಿ ರೈಲು ಅಪಘಾತ ಸಂಭವಿಸಿದೆ. ಈ ​​ಬಾರಿ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ಪ್ರಯಾಣಿಕ ರೈಲುಗಳ ನಡುವೆ ನಡೆದ ಡಿಕ್ಕಿಯಲ್ಲಿ ಇದುವರೆಗೆ ಕನಿಷ್ಠ 8 ಸಾವುಗಳು ಮತ್ತು ಕನಿಷ್ಠ 25 ಮಂದಿ ಗಾಯಗೊಂಡಿದ್ದಾರೆ" ಎಂದು  ಪೋಸ್ಟ್ ಮಾಡಿದ್ದಾರೆ.

ರೈಲುಗಳ ನಡುವೆ ಮುಂಭಾಗದಲ್ಲಿ ಘರ್ಷಣೆಗಳು, ಬೋಗಿಗಳ ಹಳಿತಪ್ಪುವಿಕೆ, ಅಸಹಾಯಕ ಪ್ರಯಾಣಿಕರು ಬೋಗಿಗಳಲ್ಲಿ ಸಿಕ್ಕಿಹಾಕಿಕೊಂಡು ಬಲಿಯಾಗುತ್ತಿದ್ದಾರೆ: ಇದು ಅತ್ಯಂತ ದುರದೃಷ್ಟಕರ, ಮತ್ತೆ ಮತ್ತೆ ಮರುಕಳಿಸುತ್ತಿವೆ ಎಂದು ಅವರು ಹೇಳಿದ್ದಾರೆ. 

ಮೃತರ ಸಂಬಂಧಿಕರಿಗೆ ಸಂತಾಪ ಸೂಚಿಸಿರುವ ಮಮತಾ ಬ್ಯಾನರ್ಜಿ, ಘಟನೆ ಹಿನ್ನೆಲೆಯಲ್ಲಿ ಹೆಚ್ಚಿನ ತ್ವರಿತ ರಕ್ಷಣಾ ಕ್ರಮ ಕೈಗೊಳ್ಳಬೇಕು ಮತ್ತು ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ  ವಿಜಯನಗರ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಆಂಧ್ರ ರೈಲು ಡಿಕ್ಕಿಯಲ್ಲಿ ಸಾವಿನ ಸಂಖ್ಯೆ 13 ಕ್ಕೆ ತಲುಪಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT