ಎನ್. ಚಂದ್ರಬಾಬು ನಾಯ್ಡು 
ದೇಶ

ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣ: ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು. 

ರಾಜಮಹೇಂದ್ರವರಂ: ಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು. 

53 ದಿನಗಳ ಜೈಲುವಾಸ ಮುಗಿಸಿ ಸಂಜೆ 4-20ಕ್ಕೆ ಜೈಲಿನಿಂದ ಹೊರ ಬಂದ ಅವರನ್ನು ಕುಟುಂಬಸ್ಥರು, ಪಕ್ಷದ ಮುಖಂಡರು, ಕಾರ್ಯಕರ್ತರು ಬರಮಾಡಿಕೊಂಡರು. ಜೈಲಿನ ಹೊರಗೆ ಸೇರಿದ್ದ ಸಾವಿರಾರು ಕಾರ್ಯಕರ್ತರು, ಟಿಡಿಪಿ ಧ್ವಜ ಹಾರಿಸುವ ಮೂಲಕ ನಾಯ್ಡು ಅವರಿಗೆ ಅದ್ದೂರಿ ಸ್ವಾಗತ ಕೋರಿದರು. 

ಇಂದು ಬೆಳಗ್ಗೆ ಆಂಧ್ರ ಪ್ರದೇಶ ಹೈಕೋರ್ಟ್ ಅವರಿಗೆ ಅನಾರೋಗ್ಯ ನಿಮಿತ್ತ ನಾಲ್ಕು ವಾರಗಳ ಜಾಮೀನು ಮಂಜೂರು ಮಾಡಿತ್ತು. ನವೆಂಬರ್ 28 ರಂದು ಅಥವಾ ಅದರ ಒಳಗಾಗಿ ರಾಜಮಹೇಂದ್ರವರಂ ಜೈಲು ವರಿಷ್ಠಾಧಿಕಾರಿ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ CM ಆಯ್ಕೆ ಕಗ್ಗಂಟು: ವಿಡಿ ಸತೀಶನ್ ಅಥವಾ ಕೆಸಿ ವೇಣುಗೋಪಾಲ್? ಎಲ್ಲಾ ಸಸ್ಪೆನ್ಸ್ ಗಳಿಗೆ ಇಂದು ಅಂತಿಮ ತೆರೆ!

'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್: ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್'

ದ್ವಿರಾಷ್ಟ್ರ ಸಿದ್ದಾಂತದ ಸಾವರ್ಕರ್ ವೀರ: ದೇಶ ಇಬ್ಭಾಗ ಮಾಡಿದ ಜಿನ್ನಾ ಜಾತ್ಯಾತೀತ; ಸಂಘಪರಿವಾರದ ದೇಶದ್ರೋಹದ ವ್ಯಾಖ್ಯಾನ ಬದಲಾಗಿದೆಯೇ?

ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗೂ ಮುನ್ನ ರಷ್ಯಾದ ಸೆರ್ಗೆಯ್ ಲಾವ್ರೊವ್ ಜೊತೆ ಜೈಶಂಕರ್ ಮಹತ್ವದ ಸಭೆ!

IPL 2026: 9ನೇ ಶತಕ ಸಿಡಿಸಿದ ಕೊಹ್ಲಿ, KKR ವಿರುದ್ಧ RCB ಗೆ 6 ವಿಕೆಟ್ ರೋಚಕ ಜಯ; ಅಗ್ರಸ್ಥಾನದ ಮುಕುಟ!

SCROLL FOR NEXT