ಎನ್. ಚಂದ್ರಬಾಬು ನಾಯ್ಡು 
ದೇಶ

ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣ: ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು. 

ರಾಜಮಹೇಂದ್ರವರಂ: ಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು. 

53 ದಿನಗಳ ಜೈಲುವಾಸ ಮುಗಿಸಿ ಸಂಜೆ 4-20ಕ್ಕೆ ಜೈಲಿನಿಂದ ಹೊರ ಬಂದ ಅವರನ್ನು ಕುಟುಂಬಸ್ಥರು, ಪಕ್ಷದ ಮುಖಂಡರು, ಕಾರ್ಯಕರ್ತರು ಬರಮಾಡಿಕೊಂಡರು. ಜೈಲಿನ ಹೊರಗೆ ಸೇರಿದ್ದ ಸಾವಿರಾರು ಕಾರ್ಯಕರ್ತರು, ಟಿಡಿಪಿ ಧ್ವಜ ಹಾರಿಸುವ ಮೂಲಕ ನಾಯ್ಡು ಅವರಿಗೆ ಅದ್ದೂರಿ ಸ್ವಾಗತ ಕೋರಿದರು. 

ಇಂದು ಬೆಳಗ್ಗೆ ಆಂಧ್ರ ಪ್ರದೇಶ ಹೈಕೋರ್ಟ್ ಅವರಿಗೆ ಅನಾರೋಗ್ಯ ನಿಮಿತ್ತ ನಾಲ್ಕು ವಾರಗಳ ಜಾಮೀನು ಮಂಜೂರು ಮಾಡಿತ್ತು. ನವೆಂಬರ್ 28 ರಂದು ಅಥವಾ ಅದರ ಒಳಗಾಗಿ ರಾಜಮಹೇಂದ್ರವರಂ ಜೈಲು ವರಿಷ್ಠಾಧಿಕಾರಿ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT