ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಪತ್ನಿಯ ಶೀಲ ಶಂಕಿಸಿದ ಪತಿ, ಜಗಳದಲ್ಲಿ ಪತಿಯ ಗುಪ್ತಾಂಗ ಕತ್ತರಿಸಿದ ಪತ್ನಿ

ಒಡಿಶಾ ರಾಜ್ಯದ ಅಂಗುಲ್ ಎಂಬಲ್ಲಿನ ನಾಲ್ಕೋ ಪೊಲೀಸ್ ವ್ಯಾಪ್ತಿಯ ಕಂದಸರ್ ಗ್ರಾಮದಲ್ಲಿ ಮೊನ್ನೆ ಭಾನುವಾರ ರಾತ್ರಿ ಗಂಡ-ಹೆಂಡತಿ ಮಧ್ಯೆ ಜಗಳ ನಡೆದು ತಾರಕಕ್ಕೇರಿ ಪತ್ನಿ ಪತಿಯ ಗುಪ್ತಾಂಗವನ್ನು ಕತ್ತರಿಸಿದ ಘಟನೆ ವರದಿಯಾಗಿದೆ.

ಅಂಗುಲ್(ಒಡಿಶಾ): ಒಡಿಶಾ ರಾಜ್ಯದ ಅಂಗುಲ್ ಎಂಬಲ್ಲಿನ ನಾಲ್ಕೋ ಪೊಲೀಸ್ ವ್ಯಾಪ್ತಿಯ ಕಂದಸರ್ ಗ್ರಾಮದಲ್ಲಿ ಮೊನ್ನೆ ಭಾನುವಾರ ರಾತ್ರಿ ಗಂಡ-ಹೆಂಡತಿ ಮಧ್ಯೆ ಜಗಳ ನಡೆದು ತಾರಕಕ್ಕೇರಿ ಪತ್ನಿ ಪತಿಯ ಗುಪ್ತಾಂಗವನ್ನು ಕತ್ತರಿಸಿದ ಘಟನೆ ವರದಿಯಾಗಿದೆ.

ಸಂತ್ರಸ್ತ ವ್ಯಕ್ತಿಯನ್ನು ಪರಮಾನಂದ ಮುದುಲಿ (45ವ) ಎಂದು ಗುರುತಿಸಲಾಗಿದ್ದು, ಅಂಗುಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಆರೋಪಿ ಪರಮಾನಂದ ಪತ್ನಿ ಸುಕಾಂತಿ ಮುದುಳಿ.

ಪರಮಾನಂದ, ಪತ್ನಿ ವಂಚನೆ ಮಾಡಿದ್ದಾಳೆಂದು ಶಂಕಿಸಿ ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಭಾನುವಾರ ರಾತ್ರಿ ಪತಿ ಪರಮಾನಂದ ಮತ್ತೊಮ್ಮೆ ಸುಕಾಂತಿಗೆ ವಿವಾಹೇತರ ಸಂಬಂಧ ಇದೆ ಎಂದು ಆರೋಪಿಸಿ ಜಗಳ ತೆಗೆದಿದ್ದರು. ಕೋಪದ ಭರದಲ್ಲಿ ಸುಕಾಂತಿ ಅಡುಗೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಪತಿಯ ಗುಪ್ತಾಂಗವನ್ನು ಕತ್ತರಿಸಿದ್ದಾಳೆ.
ಪರಮಾನಂದನ ಕಿರುಚಾಟವನ್ನು ಕೇಳಿದ ನೆರೆಹೊರೆಯವರು ಅವರ ಮನೆಗೆ ಬಂದು ನೋಡಿದಾಗ ಅವರು ತೀವ್ರ ರಕ್ತಸ್ರಾವದಲ್ಲಿ ಬಿದ್ದು ಹೊರಳಾಡುತ್ತಿರುವುದು ಕಾಣಿಸಿತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಪೊಲೀಸರು ಇನ್ನೂ ಯಾವುದೇ ದೂರು ಸ್ವೀಕರಿಸಿಲ್ಲ ಎಂದು ನಾಲ್ಕೊ ಐಐಸಿ ಪ್ರದೀಪ್ ಮಹಂತ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT