ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಪತ್ನಿಯ ಶೀಲ ಶಂಕಿಸಿದ ಪತಿ, ಜಗಳದಲ್ಲಿ ಪತಿಯ ಗುಪ್ತಾಂಗ ಕತ್ತರಿಸಿದ ಪತ್ನಿ

ಒಡಿಶಾ ರಾಜ್ಯದ ಅಂಗುಲ್ ಎಂಬಲ್ಲಿನ ನಾಲ್ಕೋ ಪೊಲೀಸ್ ವ್ಯಾಪ್ತಿಯ ಕಂದಸರ್ ಗ್ರಾಮದಲ್ಲಿ ಮೊನ್ನೆ ಭಾನುವಾರ ರಾತ್ರಿ ಗಂಡ-ಹೆಂಡತಿ ಮಧ್ಯೆ ಜಗಳ ನಡೆದು ತಾರಕಕ್ಕೇರಿ ಪತ್ನಿ ಪತಿಯ ಗುಪ್ತಾಂಗವನ್ನು ಕತ್ತರಿಸಿದ ಘಟನೆ ವರದಿಯಾಗಿದೆ.

ಅಂಗುಲ್(ಒಡಿಶಾ): ಒಡಿಶಾ ರಾಜ್ಯದ ಅಂಗುಲ್ ಎಂಬಲ್ಲಿನ ನಾಲ್ಕೋ ಪೊಲೀಸ್ ವ್ಯಾಪ್ತಿಯ ಕಂದಸರ್ ಗ್ರಾಮದಲ್ಲಿ ಮೊನ್ನೆ ಭಾನುವಾರ ರಾತ್ರಿ ಗಂಡ-ಹೆಂಡತಿ ಮಧ್ಯೆ ಜಗಳ ನಡೆದು ತಾರಕಕ್ಕೇರಿ ಪತ್ನಿ ಪತಿಯ ಗುಪ್ತಾಂಗವನ್ನು ಕತ್ತರಿಸಿದ ಘಟನೆ ವರದಿಯಾಗಿದೆ.

ಸಂತ್ರಸ್ತ ವ್ಯಕ್ತಿಯನ್ನು ಪರಮಾನಂದ ಮುದುಲಿ (45ವ) ಎಂದು ಗುರುತಿಸಲಾಗಿದ್ದು, ಅಂಗುಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಆರೋಪಿ ಪರಮಾನಂದ ಪತ್ನಿ ಸುಕಾಂತಿ ಮುದುಳಿ.

ಪರಮಾನಂದ, ಪತ್ನಿ ವಂಚನೆ ಮಾಡಿದ್ದಾಳೆಂದು ಶಂಕಿಸಿ ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಭಾನುವಾರ ರಾತ್ರಿ ಪತಿ ಪರಮಾನಂದ ಮತ್ತೊಮ್ಮೆ ಸುಕಾಂತಿಗೆ ವಿವಾಹೇತರ ಸಂಬಂಧ ಇದೆ ಎಂದು ಆರೋಪಿಸಿ ಜಗಳ ತೆಗೆದಿದ್ದರು. ಕೋಪದ ಭರದಲ್ಲಿ ಸುಕಾಂತಿ ಅಡುಗೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಪತಿಯ ಗುಪ್ತಾಂಗವನ್ನು ಕತ್ತರಿಸಿದ್ದಾಳೆ.
ಪರಮಾನಂದನ ಕಿರುಚಾಟವನ್ನು ಕೇಳಿದ ನೆರೆಹೊರೆಯವರು ಅವರ ಮನೆಗೆ ಬಂದು ನೋಡಿದಾಗ ಅವರು ತೀವ್ರ ರಕ್ತಸ್ರಾವದಲ್ಲಿ ಬಿದ್ದು ಹೊರಳಾಡುತ್ತಿರುವುದು ಕಾಣಿಸಿತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಪೊಲೀಸರು ಇನ್ನೂ ಯಾವುದೇ ದೂರು ಸ್ವೀಕರಿಸಿಲ್ಲ ಎಂದು ನಾಲ್ಕೊ ಐಐಸಿ ಪ್ರದೀಪ್ ಮಹಂತ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT