India ಮೈತ್ರಿಕೂಟದ ನಾಯಕರು 
ದೇಶ

ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ಪಣ, ಶೀಘ್ರದಲ್ಲೇ ಸೀಟು ಹಂಚಿಕೆಗೆ ನಿರ್ಧಾರ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟೂ ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ಶುಕ್ರವಾರ ನಿರ್ಧರಿಸಿದೆ ಮತ್ತು ಕೊಟ್ಟು- ತೆಗೆದುಕೊಳ್ಳುವ ಉತ್ಸಾಹದಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಶೀಘ್ರವಾಗಿ ಮುಕ್ತಾಯ ಗೊಳಿಸಲಾಗುವುದು ಎಂದು ಹೇಳಿದೆ. ಇದನ್ನು ಪರಿಣಾಮಕಾರಿ ಅಳವಡಿಸಿಕೊಳ್ಳಲು ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ.

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟೂ ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ಶುಕ್ರವಾರ ನಿರ್ಧರಿಸಿದೆ ಮತ್ತು ಕೊಟ್ಟು- ತೆಗೆದುಕೊಳ್ಳುವ ಉತ್ಸಾಹದಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಶೀಘ್ರವಾಗಿ ಮುಕ್ತಾಯ ಗೊಳಿಸಲಾಗುವುದು ಎಂದು ಹೇಳಿದೆ. ಇದನ್ನು ಪರಿಣಾಮಕಾರಿ ಅಳವಡಿಸಿಕೊಳ್ಳಲು ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ.

ಜುಡೇಗಾ ಭಾರತ್, ಜೀತೇಗ ಭಾರತ, (ಭಾರತ ಒಗ್ಗೂಡುತ್ತದೆ, ಭಾರತ ಗೆಲ್ಲುತ್ತದೆ) ಚುನಾವಣೆಯ ತನ್ನ ಥೀಮ್  ಎಂದು ಮೈತ್ರಿಕೂಟ ಹೇಳಿದೆ. ನಾವು ಭಾರತದ ಪಕ್ಷಗಳು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆಯ ವ್ಯವಸ್ಥೆಯನ್ನು ತಕ್ಷಣವೇ ಪ್ರಾರಂಭಿಸಲಾಗುವುದು ಮತ್ತು ಕೊಟ್ಟು- ತೆಗೆದುಕೊಳ್ಳುವ ಮನೋಭಾವದಲ್ಲಿ ಶೀಘ್ರವಾಗಿ ಈ ಪ್ರಕಿಯೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ನಿರ್ಣಯದಲ್ಲಿ ಹೇಳಿದೆ. 

ಸಾರ್ವಜನಿಕ ಕಾಳಜಿ ಮತ್ತು ಪ್ರಾಮುಖ್ಯತೆಯ ವಿಷಯಗಳ ಕುರಿತು ದೇಶದ ವಿವಿಧ ಭಾಗಗಳಲ್ಲಿ ಶೀಘ್ರವಾಗಿ ಸಾರ್ವಜನಿಕ  ರ‍್ಯಾಲಿ ಆಯೋಜಿಸಲು ನಿರ್ಧರಿಸುತ್ತೇವೆ.  INDIA ಪಕ್ಷಗಳು ತಮ್ಮ ಸಂವಹನ ಮತ್ತು ಮಾಧ್ಯಮ ಕಾರ್ಯತಂತ್ರಗಳನ್ನು ಸಂಘಟಿಸುತ್ತವೆ ಮತ್ತು ವಿವಿಧ ಭಾಷೆಗಳಲ್ಲಿ "ಜುಡೇಗಾ ಭಾರತ್, ಜಿತೀಗಾ ಇಂಡಿಯಾ" ಎಂಬ ವಿಷಯದೊಂದಿಗೆ ಪ್ರಚಾರಗಳನ್ನು ನಡೆಸುತ್ತವೆ ಎಂದು ಹೇಳಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಯೋಜನೆಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಸುಮಾರು 28 ವಿಪಕ್ಷಗಳ ನಾಯಕರು ಸಭೆ ಸೇರಿದ್ದರು. ಗಂಟೆಗಳ ಚರ್ಚೆಯ ನಂತರ ಸಮನ್ವಯ ಸಮಿತಿ ರಚನೆಯೊಂದಿಗೆ ಸೆಪ್ಟೆಂಬರ್ ಅಂತ್ಯದೊಳಗೆ ಸೀಟು ಹಂಚಿಕೆಯ ಕೆಲಸವನ್ನು ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ರಾಷ್ಟ್ರವ್ಯಾಪಿ ಸೀಟು ಹಂಚಿಕೆ ನಡೆಯಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರು ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು. ಇದೇ ವೇಳೆ ಬಿಜೆಪಿಗೆ ತಿರುಗೇಟು ನೀಡಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಭ್ರಷ್ಟಾಚಾರದ ವಿರುದ್ಧ ಹೋರಾಡಲು INDIA ಮೈತ್ರಿಕೂಟ  ಸಂಕಲ್ಪ ಮಾಡಿದೆ ಮತ್ತು ಮಿತ್ರ-ಪರಿವಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. 

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೊಡ್ಡ ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡಲು ಬಡವರ ಬದುಕನ್ನು ಹಾಳು ಮಾಡುತ್ತಿದೆ. ಹಣದುಬ್ಬರ, ನಿರುದ್ಯೋಗದ ವಿರುದ್ಧ ಹೋರಾಡಲು ನಾವೆಲ್ಲರೂ ಒಂದೇ ಗುರಿ ಹೊಂದಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT