ಕೇಂದ್ರ ಸಚಿವ ಕೌಶಲ್ ಕಿಶೋರ್ 
ದೇಶ

ಲಖನೌ: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರನ ಮನೆಯಲ್ಲಿ ಗುಂಡೇಟಿನಿಂದ ಯುವಕ ಸಾವು!

ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖನೌ: ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಚಿವರ ಪುತ್ರ ವಿಕಾಸ್ ಕಿಶೋರ್ ದೆಹಲಿಯಲ್ಲಿದ್ದ ಸಂದರ್ಭದಲ್ಲಿ ಅವರ ಸ್ನೇಹಿತ ಎಂದು ಹೇಳಲಾದ ವಿನಯ್ ಶ್ರೀವಾಸ್ತವ್ ತಲೆಗೆ ಗುಂಡೇಟು ಬಿದ್ದು ಮೃತಪಟ್ಟಿದ್ದಾರೆ. ಹತ್ಯೆಗೆ ವಿಕಾಸ್ ಕಿಶೋರ್ ಒಡೆತನದಲ್ಲಿದ್ದ ರಿವಾಲ್ವರ್ ಬಳಸಿದ್ದು, ಅದಕ್ಕೆ ಪರವಾನಗಿ ಇತ್ತೆಂದು ಆತನ ತಂದೆ ಕೌಶಲ್ ಕಿಶೋರ್ ತಿಳಿಸಿದ್ದಾರೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವರಾಗಿರುವ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರಿಗೆ ಸೇರಿರುವ ಮನೆಯಲ್ಲಿ ಹತ್ಯೆಯಾಗಿದೆ. ಆದರೆ ಮನೆ ಇನ್ನೂ ನೋಂದಣಿಯಾಗಿಲ್ಲ ಎಂದು ಸಚಿವರ ಪತ್ನಿ ಜೈ ದೇವಿ ಹೇಳಿದ್ದಾರೆ. ಮನೆಯಲ್ಲಿದ್ದ ನಾಲ್ವರು ಪುರುಷರನ್ನು ಶ್ರೀ ವಾಸ್ತವ್ ಅವರನ್ನು ಊಟಕ್ಕೆ ಕರೆದಿದ್ದು, ಅಲ್ಲಿ ಜಗಳ ನಡೆದಿದೆ ಎಂದು ಮೃತನ ಸಹೋದರಿ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಆಕಾಶ್ ಕುಲ್ಹಾರಿ ತಿಳಿಸಿದ್ದಾರೆ.

ವಿಕಾಶ್ ಕಿಶೋರ್  ಗುರುವಾರ ಸಂಜೆ ಲಖನೌನಿಂದ ದೆಹಲಿಗೆ ತೆರಳಿದ್ದು, ತಮ್ಮ ನಿವಾಸದಲ್ಲಿ ರಿವಾಲ್ವರ್  ಬಿಟ್ಟು ಹೋಗಿದ್ದರು, ಘಟನೆಯಲ್ಲಿ ಅದನ್ನು ಹೇಗೆ ಬಳಸಲಾಗಿದೆ ಮತ್ತು ಯಾರು ಬಳಸಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸಚಿವರು ಹೇಳಿದರು. ಮೃತರ ತಲೆಗೆ ಒಂದು ಗುಂಡೇಟಿನ ಗಾಯವಿದೆ. ಘಟನೆಯಲ್ಲಿ ಬಳಸಿದ ಗನ್ ವಿಕಾಸ್ ಕಿಶೋರ್ ಹೆಸರಿನಲ್ಲಿ ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನು ಪರಿಶೀಲಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ  ರಾಹುಲ್ ರಾಜ್  ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT