ಕೇಂದ್ರ ಸಚಿವ ಕೌಶಲ್ ಕಿಶೋರ್ 
ದೇಶ

ಲಖನೌ: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರನ ಮನೆಯಲ್ಲಿ ಗುಂಡೇಟಿನಿಂದ ಯುವಕ ಸಾವು!

ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖನೌ: ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಚಿವರ ಪುತ್ರ ವಿಕಾಸ್ ಕಿಶೋರ್ ದೆಹಲಿಯಲ್ಲಿದ್ದ ಸಂದರ್ಭದಲ್ಲಿ ಅವರ ಸ್ನೇಹಿತ ಎಂದು ಹೇಳಲಾದ ವಿನಯ್ ಶ್ರೀವಾಸ್ತವ್ ತಲೆಗೆ ಗುಂಡೇಟು ಬಿದ್ದು ಮೃತಪಟ್ಟಿದ್ದಾರೆ. ಹತ್ಯೆಗೆ ವಿಕಾಸ್ ಕಿಶೋರ್ ಒಡೆತನದಲ್ಲಿದ್ದ ರಿವಾಲ್ವರ್ ಬಳಸಿದ್ದು, ಅದಕ್ಕೆ ಪರವಾನಗಿ ಇತ್ತೆಂದು ಆತನ ತಂದೆ ಕೌಶಲ್ ಕಿಶೋರ್ ತಿಳಿಸಿದ್ದಾರೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವರಾಗಿರುವ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರಿಗೆ ಸೇರಿರುವ ಮನೆಯಲ್ಲಿ ಹತ್ಯೆಯಾಗಿದೆ. ಆದರೆ ಮನೆ ಇನ್ನೂ ನೋಂದಣಿಯಾಗಿಲ್ಲ ಎಂದು ಸಚಿವರ ಪತ್ನಿ ಜೈ ದೇವಿ ಹೇಳಿದ್ದಾರೆ. ಮನೆಯಲ್ಲಿದ್ದ ನಾಲ್ವರು ಪುರುಷರನ್ನು ಶ್ರೀ ವಾಸ್ತವ್ ಅವರನ್ನು ಊಟಕ್ಕೆ ಕರೆದಿದ್ದು, ಅಲ್ಲಿ ಜಗಳ ನಡೆದಿದೆ ಎಂದು ಮೃತನ ಸಹೋದರಿ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಆಕಾಶ್ ಕುಲ್ಹಾರಿ ತಿಳಿಸಿದ್ದಾರೆ.

ವಿಕಾಶ್ ಕಿಶೋರ್  ಗುರುವಾರ ಸಂಜೆ ಲಖನೌನಿಂದ ದೆಹಲಿಗೆ ತೆರಳಿದ್ದು, ತಮ್ಮ ನಿವಾಸದಲ್ಲಿ ರಿವಾಲ್ವರ್  ಬಿಟ್ಟು ಹೋಗಿದ್ದರು, ಘಟನೆಯಲ್ಲಿ ಅದನ್ನು ಹೇಗೆ ಬಳಸಲಾಗಿದೆ ಮತ್ತು ಯಾರು ಬಳಸಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸಚಿವರು ಹೇಳಿದರು. ಮೃತರ ತಲೆಗೆ ಒಂದು ಗುಂಡೇಟಿನ ಗಾಯವಿದೆ. ಘಟನೆಯಲ್ಲಿ ಬಳಸಿದ ಗನ್ ವಿಕಾಸ್ ಕಿಶೋರ್ ಹೆಸರಿನಲ್ಲಿ ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನು ಪರಿಶೀಲಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ  ರಾಹುಲ್ ರಾಜ್  ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT