ನಿತೀಶ್ ಕುಮಾರ್ 
ದೇಶ

ನಾವು ಅವಧಿಪೂರ್ವ ಚುನಾವಣೆ ಸಾಧ್ಯತೆಗೆ ತಯಾರಿರಬೇಕು: ನಿತೀಶ್ ಕುಮಾರ್

ಬಿಜೆಪಿ ಎದುರಾಳಿ ಮೈತ್ರಿಕೂಟದ ನಾಯಕರಲ್ಲಿ ಪ್ರಮುಖರಾಗಿರುವ ಬಿಹಾರ ಸಿಎಂ ಅವಧಿಪೂರ್ವ ಚುನಾವಣೆ ಸಾಧ್ಯತೆಗೆ ತಯಾರಾಗಿರಬೇಕು ಎಂದು ಹೇಳಿದ್ದಾರೆ. 

ಮುಂಬೈ: ಬಿಜೆಪಿ ಎದುರಾಳಿ ಮೈತ್ರಿಕೂಟದ ನಾಯಕರಲ್ಲಿ ಪ್ರಮುಖರಾಗಿರುವ ಬಿಹಾರ ಸಿಎಂ ಅವಧಿಪೂರ್ವ ಚುನಾವಣೆ ಸಾಧ್ಯತೆಗೆ ತಯಾರಾಗಿರಬೇಕು ಎಂದು ಹೇಳಿದ್ದಾರೆ. 

ಮುಂಬೈ ನಲ್ಲಿ ಎರಡು ದಿನಗಳ ಕಾಲ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, ಯಾವಾಗ ಚುನಾವಣೆ ನಡೆದರೂ ಬಿಜೆಪಿಯನ್ನು ವಿಪಕ್ಷಗಳ ಮೈತ್ರಿಕೂಟ ಮಣಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ದೇಶದ ಇತಿಹಾಸವನ್ನು ಬದಲಿಸಲು ಬಯಸುತ್ತಿದೆ. ಆದರೆ ನಮ್ಮ ಉದ್ದೇಶ ದೇಶವನ್ನು ಬಲಿಷ್ಠಗೊಳಿಸುವುದು ಹಾಗೂ ಸಮಾಜದ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಯನ್ನು ಖಚಿತಪಡಿಸುವುದಾಗಿದೆ. ನಾವು ವೇಗವಾಗಿ ಚಲಿಸುತ್ತಿದ್ದೇವೆ. ಚುನಾವಣೆಗಳು (ಲೋಕಸಭೆಗೆ) ಮುಂಚೆಯೇ ನಡೆಯಬಹುದು ಮತ್ತು ನಾವು ಜಾಗರೂಕರಾಗಿರಬೇಕು, ”ಎಂದು ಜನತಾ ದಳ-ಯುನೈಟೆಡ್ ನಾಯಕರೂ ಆಗಿರುವ ನಿತೀಶ್ ಹೇಳಿದ್ದಾರೆ.

ಅವಧಿ ಪೂರ್ವ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಒಂದು ದೇಶ ಒಂದು ಚುನಾವಣೆ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ರಚನೆಯಾದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ