ಸಾಂದರ್ಭಿಕ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರ ಸೆರೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಅವಿತಿದ್ದ ಇಬ್ಬರು ಉಗ್ರರನ್ನು ವಿಶೇಷ ಕಾರ್ಯಾಚರಣೆ ನಡೆಸಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂದಿತ ಆರೋಪಿಗಳನ್ನು ಘಾಟ್ ಗ್ರಾಮದ ಫಿರ್ದೌಸ್ ಅಹ್ಮದ್ ವಾನಿ ಮತ್ತು ಭಾರತ್ ಗ್ರಾಮದ ಖುರ್ಷಿದ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ.

ಇಬ್ಬರೂ ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದು, 1990 ರ ದಶಕದಲ್ಲಿ ತಮ್ಮ ತವರು ಜಿಲ್ಲೆಯಲ್ಲಿ ಉಗ್ರಗಾಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಳೆದ ಹಲವು ದಶಕಗಳಿಂದ ಇವರು ಸ್ಥಳೀಯ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇತ್ತೀಚಿನ ಬಂಧನಗಳೊಂದಿಗೆ, ಆಗಸ್ಟ್ 31 ರಿಂದ ಜಮ್ಮು ಪ್ರದೇಶದಲ್ಲಿ ದಶಕಗಳಿಂದ ತಲೆಮರೆಸಿಕೊಂಡಿರುವ ಒಟ್ಟು 10 ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಹೆಚ್ಚಿನವರು ದೋಡಾ ಜಿಲ್ಲೆಯ ನಿವಾಸಿಗಳಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಅಧಿಕಾರಿಗಳ ಪ್ರಕಾರ, ವಿಶೇಷ ತನಿಖಾ ಸಂಸ್ಥೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಶೂನ್ಯ ಭಯೋತ್ಪಾದನೆಯನ್ನು ಸಾಧಿಸುವ ತನ್ನ ದೊಡ್ಡ ಉದ್ದೇಶ ಮತ್ತು ಆದೇಶದ ಅನುಸಾರವಾಗಿ, ಕಾನೂನಿನಡಿಯಲ್ಲಿ ವಿಚಾರಣೆಯನ್ನು ಎದುರಿಸಲು ಭಯೋತ್ಪಾದನೆಗೆ ಸಂಬಂಧಿಸಿದ ಎಲ್ಲಾ ಪರಾರಿ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲು ವಿಶೇಷ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಕಾಶ್ಮೀರದಲ್ಲಿ 417 ಮತ್ತು ಜಮ್ಮುವಿನಲ್ಲಿ 317 ಸೇರಿದಂತೆ ಒಟ್ಟು 734 ತಲೆಮರೆಸಿಕೊಂಡವರಲ್ಲಿ 327 ಭಯೋತ್ಪಾದಕ ಮತ್ತು ವಿಚ್ಛಿದ್ರಕಾರಕ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಭಯೋತ್ಪಾದನೆ ತಡೆ ಕಾಯ್ದೆಯಲ್ಲಿ ಬೇಕಾಗಿದ್ದಾರೆ, ಎಸ್‌ಐಎ ಇದುವರೆಗೆ 369 ತಲೆಮರೆಸಿಕೊಂಡವರನ್ನು ಪರಿಶೀಲಿಸಿದೆ ಮತ್ತು ಗುರುತಿಸಿದೆ. ಈ ಪೈಕಿ ಜಮ್ಮುವಿನಲ್ಲಿ 215 ಮತ್ತು ಕಾಶ್ಮೀರದಲ್ಲಿ 154 ತಲೆಮರೆಸಿಕೊಂಡವರನ್ನು ಪರಿಶೀಲಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT