ಮಿಥಾಲಿ ರಾಯ್ 
ದೇಶ

ಪಶ್ಚಿಮ ಬಂಗಾಳ: ಧುಪ್ಗುರಿ ಉಪಚುನಾವಣೆಗೂ ಮುನ್ನ ಟಿಎಂಸಿಗೆ ಆಘಾತ, ಬಿಜೆಪಿ ಸೇರಿದ ಮಾಜಿ ಶಾಸಕಿ

ಪಶ್ಚಿಮ ಬಂಗಾಳದ ಧುಪ್ಗುರಿ ಕ್ಷೇತ್ರದ ಉಪಚುನಾವಣೆಗೂ ಮುನ್ನ ಟಿಎಂಸಿ ಭಾರೀ ಹಿನ್ನಡೆ ಅನುಭವಿಸಿದೆ. ಉಪಚುನಾವಣೆಗೆ ಎರಡು ದಿನ ಇರುವಾಗಲೇ ಮಾಜಿ ಶಾಸಕಿ ಮಿಥಾಲಿ ರಾಯ್ ಬಿಜೆಪಿ ಸೇರಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಧುಪ್ಗುರಿ ಕ್ಷೇತ್ರದ ಉಪಚುನಾವಣೆಗೂ ಮುನ್ನ ಟಿಎಂಸಿ ಭಾರೀ ಹಿನ್ನಡೆ ಅನುಭವಿಸಿದೆ. ಉಪಚುನಾವಣೆಗೆ ಎರಡು ದಿನ ಇರುವಾಗಲೇ ಮಾಜಿ ಶಾಸಕಿ ಮಿಥಾಲಿ ರಾಯ್ ಬಿಜೆಪಿ ಸೇರಿದ್ದಾರೆ. 

ಮಿಥಾಲಿ ರಾಯ್ 2016ರಲ್ಲಿ ಟಿಎಂಸಿ ಟಿಕೆಟ್‌ನಲ್ಲಿ ಧುಪ್ಗುರಿ ಕ್ಷೇತ್ರದಿಂದ ಗೆದ್ದಿದ್ದರು. ಆದರೆ, 2021ರಲ್ಲಿ ಬಿಜೆಪಿಯ ಬಿಷ್ಣುಪಾದ್ ರಾಯ್ ವಿರುದ್ಧ ಮಿಥಾಲಿ ರಾಯ್ ಸೋಲನುಭವಿಸಬೇಕಾಯಿತು.

ಬಿಜೆಪಿ ಶಾಸಕ ಬಿಷ್ಣುಪಾದ್ ರಾಯ್ ಜುಲೈ 25ರಂದು ನಿಧನರಾಗಿದ್ದರು. ಈ ಕಾರಣದಿಂದಾಗಿ ಧುಪ್ಗುರಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಸೆ.5ರಂದು ಮತದಾನ ನಡೆಯಲಿದ್ದು, ಸೆ.8ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ್ ಮಜುಂದಾರ್, ಜಲ್ಪೈಗುರಿಯ ಬಿಜೆಪಿ ಸಂಸದ ಜಯಂತ್ ರಾಯ್, ದಬ್ಗ್ರಾಮ್ ಫುಲ್ಬರಿ ಶಾಸಕಿ ಶಿಖಾ ಚಟರ್ಜಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಬಾಪಿ ಗೋಸ್ವಾಮಿ ಅವರ ಸಮ್ಮುಖದಲ್ಲಿ ಮಿಥಾಲಿ ರಾಯ್ ಬಿಜೆಪಿ ಸದಸ್ಯತ್ವ ಪಡೆದರು.

ಟಿಎಂಸಿಯಲ್ಲಿದ್ದಾಗ ಕೆಲಸ ಮಾಡಲು ಸಾಧ್ಯವಾಗಲಿಲ್ಲ
ಬಿಜೆಪಿ ಸೇರಿದ ನಂತರ ಮಿಥಾಲಿ ರಾಯ್ ಅವರು 'ಟಿಎಂಸಿಯಲ್ಲಿದ್ದಾಗ ನನಗೆ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ನನ್ನ ಮೇಲೆ ಸಾಕಷ್ಟು ಮಾನಸಿಕ ಒತ್ತಡವಿತ್ತು. ನಾನು ಧುಪ್ಗುರಿ ಉಪಚುನಾವಣೆಯಲ್ಲಿ ಪ್ರಚಾರ ಮಾಡಲು ಬಯಸಲಿಲ್ಲ ಆದರೆ ನಾನು ಹಾಗೆ ಮಾಡುವಂತೆ ಒತ್ತಾಯಿಸಲಾಯಿತು. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಕಾರಣ ಬಿಜೆಪಿ ಸದಸ್ಯತ್ವ ಸ್ವೀಕರಿಸಿದ್ದು, ಆ ಮೂಲಕ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ ಜನರ ಅಗತ್ಯಗಳನ್ನು ಈಡೇರಿಸುತ್ತೇನೆ. ಮಿಥಾಲಿ ರಾಯ್ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಇದು ಪಕ್ಷವನ್ನು ಬಲಪಡಿಸುತ್ತದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಟಿಎಂಸಿ ನಿರ್ಮಲ್ ಚಂದ್ರ ರಾಯ್ ಅವರಿಗೆ ಟಿಕೆಟ್ ನೀಡಿದೆ. ಮತ್ತೊಂದೆಡೆ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರ ವಿಧವೆ ತಾಪ್ಸಿ ರಾಯ್‌ಗೆ ಬಿಜೆಪಿ ಟಿಕೆಟ್ ನೀಡಿದೆ. ಸಿಪಿಐ(ಎಂ) ಜನಪದ ಗಾಯಕ ಈಶ್ವರಚಂದ್ರ ರಾಯ್‌ಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್ ಸಿಪಿಐ(ಎಂ) ಅಭ್ಯರ್ಥಿಗೆ ಬೆಂಬಲ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT