ಪ್ರಧಾನಿ ಮೋದಿ 
ದೇಶ

ಅರುಣಾಚಲ ಪ್ರದೇಶದಲ್ಲಿ ಜಿ-20 ಆಯೋಜನೆಗೆ ಚೀನಾ ಆಕ್ಷೇಪ: ಸಂದರ್ಶನದಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ಅಂದರೆ...

ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶದಲ್ಲಿ ಜಿ-20 ಸಭೆಗಳನ್ನು ಆಯೋಜನೆ ಮಾಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. 

ನವದೆಹಲಿ: ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶದಲ್ಲಿ ಜಿ-20 ಸಭೆಗಳನ್ನು ಆಯೋಜನೆ ಮಾಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. 

ಪ್ರಧಾನಿ ಮೋದಿ ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ದೇಶದ ಯಾವುದೇ ಭಾಗದಲ್ಲಿ ಜಿ-20 ಸಭೆಗಳನ್ನು ನಡೆಸುವುದು ಭಾರತಕ್ಕೆ ಸ್ವಾಭಾವಿಕವಾಗಿದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಭಾರತದ ಸಾಂಸ್ಕೃತಿಕ ಹಾಗೂ ಪ್ರಾದೇಶಿವ ವೈವಿಧ್ಯತೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸುವುದಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಿ-20 ಸಭೆಗಳನ್ನು ದೇಶಾದ್ಯಂತ ಹಮ್ಮಿಕೊಂಡಿದೆ. ಜಿ-20 ಸದಸ್ಯ ರಾಷ್ಟ್ರವೂ ಆಗಿರುವ ಚೀನಾ ಹಾಗೂ ಪಾಕಿಸ್ತಾನಗಳು ಕಾಶ್ಮೀರವನ್ನು ವಿವಾದಿತ ಪ್ರದೇಶ ಎಂದು ಹೇಳುತ್ತಿದ್ದು, ಅಲ್ಲಿ ಜಿ-20 ಸಭೆಯನ್ನು ನಡೆಸಿರುವುದನ್ನು ವಿರೋಧಿಸಿವೆ. 

ಇದಷ್ಟೇ ಅಲ್ಲದೇ ಅರುಣಾಚಲ ಪ್ರದೇಶದಲ್ಲಿ ಭಾರತದ ಸಾರ್ವಭೌಮತ್ವವನ್ನು ಚೀನಾ ಪ್ರಶ್ನಿಸಿದೆ. ಆದರೆ ಭಾರತ ಈಗಾಗಲೇ ಚೀನಾ-ಪಾಕಿಸ್ತಾನದ ಹೇಳಿಕೆಗಳನ್ನು ತಿರಸ್ಕರಿಸಿದೆ. 'ನಾವು ಆ ಸ್ಥಳಗಳಲ್ಲಿ ಸಭೆಗಳನ್ನು ನಡೆಸುವುದನ್ನು ತಪ್ಪಿಸಿದ್ದರೆ ಚೀನಾದ ಪ್ರಶ್ನೆ ಮಾನ್ಯವಾಗಿರುತ್ತದೆ. ನಮ್ಮದು ವಿಶಾಲ, ಸುಂದರ ಮತ್ತು ವೈವಿಧ್ಯಮಯ ರಾಷ್ಟ್ರ. ಜಿ 20 ಸಭೆಗಳು ನಡೆಯುತ್ತಿರುವಾಗ, ನಮ್ಮ ದೇಶದ ಪ್ರತಿಯೊಂದು ಭಾಗದಲ್ಲೂ ಸಭೆಗಳು ನಡೆಯುವುದು ಸಹಜ ಅಲ್ಲವೇ' ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮೋದಿ ಹೇಳಿದ್ದಾರೆ.

ಭಾರತ ಮೇ 22 ರಿಂದ ಮೂರು ದಿನಗಳ ಕಾಲ ಪ್ರವಾಸೋದ್ಯಮದ ಮೂರನೇ ಜಿ 20 ವರ್ಕಿಂಗ್ ಗ್ರೂಪ್ ಸಭೆಯನ್ನು ಶ್ರೀನಗರದಲ್ಲಿ ನಡೆಸಿತ್ತು. ಚೀನಾವನ್ನು ಹೊರತುಪಡಿಸಿ ಎಲ್ಲಾ ಜಿ-20 ದೇಶಗಳ ಪ್ರತಿನಿಧಿಗಳು ಈ ಕಾರ್ಯಕ್ರಮಕ್ಕಾಗಿ ಸುಂದರವಾದ ಕಣಿವೆಗೆ ಭೇಟಿ ನೀಡಿದ್ದರು. ಇದಷ್ಟೇ ಅಲ್ಲದೇ ಅರುಣಾಚಲ ಪ್ರದೇಶದಲ್ಲಿ ಮಾರ್ಚ್ ನಲ್ಲಿ ನಡೆದ ಜಿ-20 ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳು ಭೇಟಿ ನೀಡಿದ್ದರು. 

ಚೀನಾದ ಹೇಳಿಕೆಗಳನ್ನು ತಳ್ಳಿಹಾಕಿರುವ ಭಾರತ, ತನ್ನ ಸ್ವಂತ ಪ್ರದೇಶದಲ್ಲಿ ಸಭೆಗಳನ್ನು ನಡೆಸುವುದಕ್ಕೆ ತಾನು ಸ್ವತಂತ್ರವಾಗಿದೆ ಎಂದು ಹೇಳಿದೆ. ಭಾರತದ ಜಿ 20 ಅಧ್ಯಕ್ಷತೆಯ ಅವಧಿ ಮುಗಿಯುವ ವೇಳೆಗೆ, ಎಲ್ಲಾ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳ 60 ನಗರಗಳಲ್ಲಿ 220 ಕ್ಕೂ ಹೆಚ್ಚು ಸಭೆಗಳು ನಡೆಯಲಿವೆ ಮತ್ತು ಸುಮಾರು 125 ರಾಷ್ಟ್ರಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಹಾಗೂ  ಭಾರತೀಯರ ಕೌಶಲ್ಯಗಳನ್ನು ವೀಕ್ಷಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT