ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ 
ದೇಶ

ಹಿಂಸಾರೂಪಕ್ಕೆ ತಿರುಗಿದ ಮಹಾರಾಷ್ಟ್ರದ ಜಲ್ನಾದಲ್ಲಿ ಮರಾಠಾ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ: ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಿನ್ನೆ ಶನಿವಾರ ಹಿಂಸಾಚಾರ ಸಂಭವಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಕೋರಿ ಪ್ರತಿಭಟನಾಕಾರರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಂಬಾಡ್‌ನಲ್ಲಿ ಟ್ರಕ್‌ಗೆ ಬೆಂಕಿ ಹಚ್ಚಲಾಗಿದ್ದು, ಇತರೆ ವಾಹನಗಳು ಧ್ವಂಸಗೊಂಡಿವೆ. 

ಮುಂಬೈ: ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಿನ್ನೆ ಶನಿವಾರ ಹಿಂಸಾಚಾರ ಸಂಭವಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಕೋರಿ ಪ್ರತಿಭಟನಾಕಾರರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಂಬಾಡ್‌ನಲ್ಲಿ ಟ್ರಕ್‌ಗೆ ಬೆಂಕಿ ಹಚ್ಚಲಾಗಿದ್ದು, ಇತರೆ ವಾಹನಗಳು ಧ್ವಂಸಗೊಂಡಿವೆ. 

ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಶುಕ್ರವಾರವೂ ಹಿಂಸಾಚಾರ ಭುಗಿಲೆದ್ದಿತು ಮತ್ತು ಅವರ ಮೇಲೆ ಕಲ್ಲು ತೂರಾಟ ನಡೆಸಲಾಯಿತು, ಇದು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಬಳಕೆಗೆ ಕಾರಣವಾಯಿತು. ಅಂಬಾದ್ ತಹಸಿಲ್‌ನ ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಸುಮಾರು 20 ಪ್ರತಿಭಟನಾಕಾರರು ಮತ್ತು 37 ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸ್ಥಳೀಯ ಮರಾಠಾ ಮುಖಂಡ ಮನೋಜ್ ಜಾರಂಗೆ ನೇತೃತ್ವದಲ್ಲಿ ನೂರಾರು ಪ್ರತಿಭಟನಾಕಾರರು ಮೀಸಲಾತಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಮರಾಠ ಮೀಸಲಾತಿಗಾಗಿ ನಡೆಯುತ್ತಿರುವ ಆಂದೋಲನದ ನಡುವೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಇಂದು ಜಲ್ನಾಗೆ ಭೇಟಿ ನೀಡಲಿದ್ದಾರೆ. ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಹಿಂಸಾರೂಪಕ್ಕೆ ತಿರುಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?