ಸಾಂದರ್ಭಿಕ ಚಿತ್ರ 
ದೇಶ

ಬಿಜೆಪಿ ಸಂಪತ್ತು 6,046 ಕೋಟಿ ರೂ., ಕಾಂಗ್ರೆಸ್ 805 ಕೋಟಿ ರೂ. ಆಸ್ತಿ ಹೊಂದಿದೆ

ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ.

ನವದೆಹಲಿ: ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ.

2020-21ರಲ್ಲಿ ಈ ಎಂಟು ರಾಷ್ಟ್ರೀಯ ಪಕ್ಷಗಳ ಒಟ್ಟು ಆಸ್ತಿ 7,297.62 ಕೋಟಿ ರೂ.ಗಳಷ್ಟಿತ್ತು ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವರದಿ ಮಾಡಿದೆ.

ಎಂಟು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಎನ್‌ಸಿಪಿ, ಬಿಎಸ್‌ಪಿ, ಸಿಪಿಐ, ಸಿಪಿಐ(ಎಂ), ಎಐಟಿಸಿ ಮತ್ತು ಎನ್‌ಪಿಇಪಿ ಘೋಷಿಸಿದ 2020-21 ಮತ್ತು 2021-22ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಎಡಿಆರ್ ವಿಶ್ಲೇಷಿಸಿದೆ. 

ಎಡಿಆರ್ ಪ್ರಕಾರ, 2020-21ರ ಆರ್ಥಿಕ ವರ್ಷದಲ್ಲಿ, ಬಿಜೆಪಿಯು 4,990 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿತ್ತು. 2021-22 ರಲ್ಲಿ ಕೇಸರಿ ಪಕ್ಷದ ಆಸ್ತಿ 6,046.81 ಕೋಟಿಗೆ ಅಂದರೆ ಶೇ. 21.17 ರಷ್ಟು ಹೆಚ್ಚಾಗಿದೆ. 

2020-21ರಲ್ಲಿ ಕಾಂಗ್ರೆಸ್‌ ಘೋಷಿತ ಆಸ್ತಿ 691.11 ಕೋಟಿ ರೂ.ಗಳಷ್ಟಿತ್ತು. ಇದು 2021-22ರಲ್ಲಿ ಶೇ.16.58 ರಷ್ಟು ಏರಿಕೆಯಾಗಿ 805.68 ಕೋಟಿ ರೂ.ಗೆ ತಲುಪಿದೆ. ಬಿಎಸ್ಪಿ ತನ್ನ ವಾರ್ಷಿಕ ಘೋಷಿತ ಆಸ್ತಿಯಲ್ಲಿ ಇಳಿಕೆಯನ್ನು ತೋರಿಸಿರುವ ಏಕೈಕ ರಾಷ್ಟ್ರೀಯ ಪಕ್ಷವಾಗಿದೆ ಎಂದು ವರದಿ ಹೇಳಿದೆ.

2020-21 ಮತ್ತು 2021-22 ರ ನಡುವೆ BSP ಯ ಒಟ್ಟು ಆಸ್ತಿ 732.79 ಕೋಟಿಯಿಂದ 690.71 ಕೋಟಿಗೆ ಶೇಕಡಾ ಅಂದರೆ 5.74 ರಷ್ಟು ಕಡಿಮೆಯಾಗಿದೆ. ಟಿಎಂಸಿಯ ಒಟ್ಟು ಆಸ್ತಿ 2020-21ರಲ್ಲಿ ರೂ.182.001 ಕೋಟಿಯಿಂದ ರೂ.458.10 ಕೋಟಿ ರೂ.ಗೆ ಏರಿಕೆಯಾಗಿದ್ದು, ಶೇ.151.70ರಷ್ಟು ಹೆಚ್ಚಳವಾಗಿದೆ ಎಂದು ಎಡಿಆರ್ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT