ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ್ ಬೋಸ್ 
ದೇಶ

'ರಾಜಭವನ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ': ಪಶ್ಚಿಮ ಬಂಗಾಳ ಶಿಕ್ಷಣ ಸಚಿವ

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ರಾಜ್ಯದ ಏಳು ವಿಶ್ವವಿದ್ಯಾನಿಲಯಗಳ ಹಂಗಾಮಿ ಉಪಕುಲಪತಿಗಳ ನೇಮಕದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರು...

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ರಾಜ್ಯದ ಏಳು ವಿಶ್ವವಿದ್ಯಾನಿಲಯಗಳ ಹಂಗಾಮಿ ಉಪಕುಲಪತಿಗಳ ನೇಮಕದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರು, ರಾಜಭವನ "ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಸೋಮವಾರ ಆರೋಪಿಸಿದ್ದಾರೆ ಮತ್ತು ಈ ಕ್ರಮ ವಿಶ್ವವಿದ್ಯಾಲಯಗಳ ವ್ಯವಸ್ಥೆಯನ್ನು "ನಾಶ" ಮಾಡಬಹುದು ಎಂದು ಹೇಳಿದ್ದಾರೆ.

ರಾಜ್ಯಪಾಲರ ಈ ಕ್ರಮವು, ವಿವಿಗಳ ಕುಲಾಧಿಪತಿಯಾಗಿ ರಾಜ್ಯಪಾಲರ ಪಾತ್ರ ಮತ್ತು ಕಾರ್ಯಗಳಿಗೆ ಸಂಬಂಧಿಸಿದಂತೆ "ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಯನ್ನು ಉಲ್ಲಂಘಿಸಿದೆ" ಎಂದು ಸಚಿವರು ತಿಳಿಸಿದ್ದಾರೆ.

ಪ್ರತಿಷ್ಠಿತ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯ, MAKAUT ಮತ್ತು ಬುರ್ದ್ವಾನ್ ವಿಶ್ವವಿದ್ಯಾಲಯ ಸೇರಿದಂತೆ ಏಳು ವಿವಿಗಳಿಗೆ ಹಂಗಾಮಿ ಉಪಕುಲಪತಿಗಳನ್ನು ರಾಜ್ಯಪಾಲರು ಭಾನುವಾರ ರಾತ್ರಿ ನೇಮಿಸಿದ್ದಾರೆ.

"ರಾಜ್ಯಪಾಲರ ಈ ಕ್ರಮವು ಉನ್ನತ ಶಿಕ್ಷಣ ವ್ಯವಸ್ಥೆಯನ್ನು ದಿವಾಳಿ ಮಾಡುವ ಗುರಿ ಹೊಂದಿದೆ. ಅವರು ಆಯಾ ರಾಜ್ಯದ ವಿಶ್ವವಿದ್ಯಾಲಯಗಳ ನಿಯಮಗಳನ್ನು ನಾಶಪಡಿಸುತ್ತಿದ್ದಾರೆ. ಯಾರನ್ನೂ ಸಂಪರ್ಕಿಸದೆ ಇಂತಹ ನೇಮಕಾತಿಗಳನ್ನು ಮಾಡಲಾಗಿದೆ. ಅವರು ಸರ್ವಾಧಿಕಾರಿ ರೀತಿಯಲ್ಲಿ ವರ್ತಿಸುತ್ತಿದ್ದಾರೆ" ಎಂದು ಬಸು ಅವರು ಪತ್ರಿಕಾಗೋಷ್ಠಿಯಲ್ಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT