ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ರಿಯಾಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆ, ಪೊಲೀಸರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯ ಸಮಯದಲ್ಲಿ ಎನ್‌ಕೌಂಟರ್ ನಡೆದಿದೆ. ತುಲಿ ಪ್ರದೇಶದ ಗಾಲಿ ಸೊಹಾಬ್ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರು ಇರುವ ಬಗ್ಗೆ ಪೊಲೀಸರಿಗೆ ನಿರ್ದಿಷ್ಟ ಮಾಹಿತಿ ಬಂದ ನಂತರ ಮಧ್ಯಾಹ್ನ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಜಮ್ಮು ವಲಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ಹೇಳಿದ್ದಾರೆ.

ಇಲ್ಲಿಯವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಇನ್ನೊಬ್ಬನನ್ನು ತಟಸ್ಥಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಎಡಿಜಿಪಿ ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಸಹ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT