ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ರಿಯಾಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆ, ಪೊಲೀಸರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯ ಸಮಯದಲ್ಲಿ ಎನ್‌ಕೌಂಟರ್ ನಡೆದಿದೆ. ತುಲಿ ಪ್ರದೇಶದ ಗಾಲಿ ಸೊಹಾಬ್ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರು ಇರುವ ಬಗ್ಗೆ ಪೊಲೀಸರಿಗೆ ನಿರ್ದಿಷ್ಟ ಮಾಹಿತಿ ಬಂದ ನಂತರ ಮಧ್ಯಾಹ್ನ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಜಮ್ಮು ವಲಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ಹೇಳಿದ್ದಾರೆ.

ಇಲ್ಲಿಯವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಇನ್ನೊಬ್ಬನನ್ನು ತಟಸ್ಥಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಎಡಿಜಿಪಿ ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಸಹ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದ ವಿದ್ಯಾರ್ಥಿನಿಯರು!