ಶರ್ಮಿಳಾ 
ದೇಶ

ಕಾಂಗ್ರೆಸ್ ಜೊತೆ ವೈಎಸ್ ಶರ್ಮಿಳಾ ಪಕ್ಷ ವಿಲೀನ ಸಾಧ್ಯತೆ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಮತ್ತು ಶೀಘ್ರದಲ್ಲೇ ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ...

ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಮತ್ತು ಶೀಘ್ರದಲ್ಲೇ ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಲಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ಸೆಪ್ಟೆಂಬರ್ 17 ರಂದು ಹೈದರಾಬಾದ್ ಬಳಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಮೆಗಾ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ದೆಹಲಿ ಮೂಲಗಳು ತಿಳಿಸಿವೆ.

ಶರ್ಮಿಳಾ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೆಂಗೋಪಾಲ್ ಅವರನ್ನು ಕೇಳಿದಾಗ, "ಶರ್ಮಿಳಾ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಇದು ತುಂಬಾ ಸೌಹಾರ್ದಯುತ ಭೇಟಿಯಾಗಿದೆ. ಉಳಿದ ವಿಷಯಗಳನ್ನು ನೀವು ಕಾದು ನೋಡಿ" ಎಂದಿದ್ದಾರೆ.

ಸೆಪ್ಟೆಂಬರ್ 17 ರಂದು ತೆಲಂಗಾಣ ರಾಷ್ಟ್ರೀಯ ಏಕೀಕರಣ ದಿನವಾಗಿ ಆಚರಿಸಲಾಗುತ್ತದೆ. ಕಾಂಗ್ರೆಸ್ ಹೈದರಾಬಾದ್ ಬಳಿ "ಮೆಗಾ ರ್ಯಾಲಿ" ನಡೆಸಲಿದೆ. ಅಂದು ತೆಲಂಗಾಣಕ್ಕೆ ಐದು ಖಾತರಿಗಳನ್ನು ಘೋಷಿಸಲಾಗುವುದು ಎಂದು ವೇಣುಗೋಪಾಲ್ ಅವರು ಹೇಳಿದ್ದಾರೆ.

ಶರ್ಮಿಳಾ ಅವರು ಸಭೆಯಲ್ಲಿ ಉಪಸ್ಥಿತರಿರುವ ಸಾಧ್ಯತೆಯಿದೆ ಮತ್ತು ಮುಂದಿನ ದಿನಗಳಲ್ಲಿ ಅವರ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT